Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಡುಪಿ: 18 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಸಚಿವ ಪ್ರಮೋದ್ ಮಧ್ವರಾಜ್ ಅವರ ಮೇಲಿನ ಅಕ್ರಮ ಸಾಲ ಹಾಗೂ ವ್ಯವಹಾರಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆ ಅನ್ವಯ ನೀಡುವಂತೆ ಕೋರಿ ಆರ್ಟಿಐ ಕಾರ್ಯಕರ್ತ ಟಿ.ಜೆ.ಆಬ್ರಹಾಂ ಅವರು ಶನಿವಾರ ಸಿಂಡಿಕೇಟ್ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ಹೆಗ್ಡೆ ಅವರಿಗೆ ಅರ್ಜಿ ಸಲ್ಲಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅಬ್ರಹಾಂ, ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ನಿಯಮಾನುಸಾರವೇ ಸಾಲ ನೀಡಲಾಗಿದೆ, ಅದರಲ್ಲಿ ಯಾವುದೇ ರೀತಿ ಕಾನೂನು ಉಲ್ಲಂಘನೆ ಆಗಿಲ್ಲ ಎಂದು ಬ್ಯಾಂಕ್ನ ಮುಖ್ಯಸ್ಥರು ಸ್ಪಷ್ಟನೆ ನೀಡಿರುವುದು ಆಶ್ಚರ್ಯ ತಂದಿದೆ ಎಂದರು.
‘ಉಪ್ಪೂರು ಗ್ರಾಮದಲ್ಲಿರುವ 3 ಎಕರೆ 8 ಸೆಂಟ್ಸ್ ಭೂಮಿಗೆ ₹ 34.50 ಕೋಟಿಗಳಷ್ಟು ಸಾಲವನ್ನು 2 ಬಾರಿ ನೀಡಿದ್ದಾರೆ. ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿಯೂ ಇಲ್ಲದೆ ಇರುವ ಬೆಲೆಯನ್ನು ಉಡುಪಿ ನಗರದ ಹೊರವಲಯದಲ್ಲಿರುವ ಜಾಗವೊಂದಕ್ಕೆ ನೀಡಿರುವುದು ಅಕ್ರಮಕ್ಕೆ ಸಾಕ್ಷಿ ಆಗಿದೆ’ ಎಂದರು.
₹5 ಕೋಟಿ ಮಾನನಷ್ಟ ಮೊಕದ್ದಮೆ
‘ಸಿಂಡಿಕೇಟ್ ಬ್ಯಾಂಕ್ ಯಾವುದೇ ಅಕ್ರಮ ಎಸಗದೇ ಇದ್ದಲ್ಲಿ, ಸಚಿವ ಪ್ರಮೋದ್ ಮಧ್ವರಾಜ್ ಸಾಲ ಪಡೆಯುವ ಸಂದರ್ಭದಲ್ಲಿ ನೀಡಲಾದ ದಾಖಲೆಯನ್ನು ನೀಡಿ. ಒಂದು ವೇಳೆ ಬೇರೆ ಕಾರಣ ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿ, ನನ್ನನ್ನು ಸುಳ್ಳು ಹೇಳುವವ ಎಂಬಂತೆ ಬಿಂಬಿಸುವ ಪ್ರಯತ್ನ ನಡೆಸಿದರೆ ಅವರ ವಿರುದ್ಧ ಕನಿಷ್ಠ ₹5 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ’ ಎಂದು ಟಿ.ಜೆ. ಆಬ್ರಹಂ ಎಚ್ಚರಿಸಿದರು.
ಮತ್ತೆ ಉಡುಪಿಗೆ ಬರುವೆ
‘ಪ್ರಮೋದ್ ಮಧ್ವರಾಜ್ ಅವರ ಸಾಲದಲ್ಲಿ ಮಾತ್ರ ಅಕ್ರಮ ಅಲ್ಲ, ಅವರು ಮಲ್ಪೆಯಲ್ಲಿ ನಡೆಸುತ್ತಿರುವ ಪೆಟ್ರೋಲ್ ಬಂಕ್, ಫಿಶ್ ಮಿಲ್, ಮಣಿಪಾಲದಲ್ಲಿ ಕಟ್ಟುತ್ತಿರುವ ಭಾರೀ ಬಹುಮಹಡಿ ಕಟ್ಟಡಗಳಲ್ಲಿಯೂ ಆಕ್ರಮ ಇದೆ. ಇದನ್ನೆಲ್ಲಾ ಒಂದೊಂದಾಗಿ ಹೊರಗೆಳೆಯುತ್ತೇನೆ. ನಂತರ ವಿವರಗಳನ್ನು ನೀಡುತ್ತೇನೆ’ ಎಂದು ಅಬ್ರಹಾಂ ಹೇಳಿದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |