Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮುಂಬೈ: 19 ಮಾರ್ಚ್ (ಫಿಕ್ರೋಖಬರ್ ಸುದ್ದಿ) ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4,000 ಕೋಟಿ ರೂ. ಬ್ಯಾಂಕ್ ವಂಚನೆ ಹಗರಣದ ಸಂಬಂಧ ಸಂಸ್ಥೆಯೊಂದರ ಮೂವರು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ನ(ಪಿಎನ್ಬಿ) 12,723 ಕೋಟಿ ರೂ.ಗಳ ವಂಚನೆ ಪ್ರಕರಣ ಬೆಳಕಿಗೆ ಬಂದ ಮುಂಬೈನಲ್ಲೇ ಮತ್ತೊಂದು ಹಗರಣ ಬಹಿರಂಗಗೊಂಡಂತಾಗಿದೆ. ಪರೇಖ್ ಅಲ್ಯುಮಿನೆಕ್ಸ್ ಲಿಮಿಟೆಡ್ (ಪಿಎಎಲ್) ಸಂಸ್ಥೆಯಿಂದ ಭಾರೀ ವಂಚನೆ ಎಸಗಲಾಗಿದ್ದು, ಈ ಸಂಬಂಧ ಮುಂಬೈನ್ ಆರ್ಥಿಕ ಅಪರಾಧಗಳ ಘಟಕದ ಪೊಲೀಸರು ನಿರ್ದೇಶಕರಾದ ಭವರ್ಲಾಲ್ ಭಂಡಾರಿ, ಪ್ರೇಮಲ್ ಗೋರಾಗಾಂಧಿ ಮತ್ತು ಕಮಲೇಶ್ ಕಾನುಂಗೋ ಎಂಬುವರನ್ನು ವಂಚನೆ, ಮೋಸ, ನಂಬಿಕೆ ಮತ್ತು ಕ್ರಿಮಿನಲ್ ಒಳಸಂಚು ಆರೋಪಗಳ ಮೇಲೆ ಬಂಧಿಸಿದ್ದಾರೆ. ಈ ಸಂಸ್ಥೆಯಿಂದ 250 ಕೋಟಿ ರೂ.ಗಳ ವಂಚನೆಯಾಗಿದೆ ಎಂದು ಆಕ್ಸಿಸ್ ಬ್ಯಾಂಕ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಮೂವರನ್ನು ಬಂಧಿಸಲಾಗಿದೆ.
ತಮಗೂ ಈ ಸಂಸ್ಥೆಯಿಂದ ಸುಮಾರು 4,000 ಕೋಟಿ ರೂ.ಗಳಷ್ಟು ವಂಚನೆಯಾಗಿದೆ ಎಂದು ಇತರ ಹಣಕಾಸು ಸಂಸ್ಥೆಗಳು ಹಾಗೂ ಸಾಲ ನೀಡಿದವರು ಆರೋಪಿಸಿದ್ದು, ಮತ್ತಷ್ಟು ಅಕ್ರಮ-ಅವ್ಯವಹಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಸಾಲ ಪತ್ರ (ಲೆಟರ್ ಆಫ್ ಕ್ರೆಡಿಟ್) ಬಳಸಿ ಆಕ್ಸಿಸ್ ಬ್ಯಾಂಕ್ನ ಫೆÇೀರ್ಟ್ನಲ್ಲಿರುವ ಮುಖ್ಯ ಶಾಖೆಗೆ ಬೋಗಸ್ ಕಂಪನಿಗಳ ಮೂಲಕ ನಕಲಿ ಸರಕುಪಟ್ಟಿಗಳು (ಇನ್ವಾಯ್ಸ್) ಮತ್ತು ರಶೀದಿಗಳನ್ನು ಸೃಷ್ಟಿಸಿ 250 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಈ ಹಗರಣದಲ್ಲಿ ಬ್ಯಾಂಕ್ ಸಿಬ್ಬಂದಿ ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಳ್ಳಿ ಹಾಕಿಲ್ಲ.
ಪಿಎಎಸ್ ಸಂಸ್ಥೆಯ ಇತರ ನಿರ್ದೇಶಕರು ಮತ್ತು ಉನ್ನತಾಧಿಕಾರಿಗಳಾದ ಅಮಿತಾಭ್ ಪರೇಖ್ (ನಿಧನರಾಗಿದ್ದಾರೆ), ರಾಜೇಂದ್ರ ಗೋತಿ, ದೇವಾಂಶು ದೇಸಾಯಿ, ಕಿರಣ್ ಪಾರಿಖ್ ಮತ್ತು ವಿಕ್ರಂ ಮೊರ್ದಾನಿ ಅವರ ವಿರುದ್ಧವೂ ದೂರು ದಾಖಲಾಗಿದೆ. ಈಗ ಬಂಧಿತರಾಗಿರುವ ಮೂವರು ನಿರ್ದೇಶಕರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಈ ವಂಚನೆ ಜಾಲದಲ್ಲಿ ಶಾಮೀಲಾಗಿರುವ ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.
ಸಂ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |