Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಲಕ್ನೋ: 25 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಸಮಾಜಘಾತುಕ ಶಕ್ತಿಗಳ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಉತ್ತರ ಪ್ರದೇಶ ಪೊಲೀಸರು ಇಂದು ಮುಂಜಾನೆ ನಡೆದ ಎನ್ಕೌಂಟ್ನಲ್ಲಿ ಇಬ್ಬರು ಕುಪ್ರಸಿದ್ಧ ರೌಡಿಗಳನ್ನು ಹೊಡೆದುರುಳಿಸಿದ್ದಾರೆ. ಪೊಲೀಸರ ಗುಂಡಿಗೆ ಕುಖ್ಯಾತ ರೌಡಿಗಳಾದ ಶ್ರವಣ್ ಚೌಧರಿ ಮತ್ತು ಅಹಸಾನ್ ಅಲಿಯಾಸ್ ಸಲೀಂ ಬಲಿಯಾಗಿದ್ದಾರೆ. ಹತ ಗ್ಯಾಂಗ್ಸ್ಟರ್ಗಳಿಗೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ರೌಡಿಗಳ ಹುಟ್ಟಡಗಿಸಲು ನಿನ್ನೆಯಿಂದಲೇ ಕಾರ್ಯಾಚರಣೆಗೆ ಇಳಿದ ಉತ್ತರ ಪ್ರದೇಶದ ರೌಡಿ ನಿಗ್ರಹ ದಳ (ಎಆರ್ಎಸ್)ದ ಅಧಿಕಾರಿಗಳು, ಶ್ರವಣ್ ಚೌಧರಿಯನ್ನು ಎನ್ಕೌಂಟರ್ನಲ್ಲಿ ಕೊಂದಿದ್ದಾರೆ. ದೆಹಲಿ ಮತ್ತು ನೋಯ್ದಾದಲ್ಲಿ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದು ಶ್ರವಣ್ಗೆ ತಲಾ 50,000 ರೂ.ಗಳ ಬಹುಮಾನ ಘೋಷಿಸಲಾಗಿತ್ತು.
ಹತ ರೌಡಿಯಿಂದ ಎಕೆ-47 ರೈಫಲ್ ಮತ್ತು ಒಂದು ಎಸ್ಬಿಬಿಎಲ್ ಗನ್ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಬ್ಬ ಗ್ಯಾಂಗ್ಸ್ಟರ್ ಖತಂ: ಶಹರನ್ಪುರ್ನಲ್ಲಿ ಇಂದು ಮುಂಜಾನೆ 2 ಗಂಟೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೊಂದು ಕುಖ್ಯಾತ ಕ್ರಿಮಿನಲ್ ಅಹಸಾನ್ ಅಲಿಯಾಸ್ ಸಲೀಂ ಹತನಾದ. ಕೊಲೆ, ಕೊಲೆ ಯತ್ನ, ಸುಲಿಗೆ, ಅಪಹರಣ ಸೇರಿದಂತೆ 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದು ಈತನ ತಲೆಗೆ 25,000 ರೂ. ಬಹುಮಾನ ಘೋಷಿಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ಗಾಯಗೊಂಡಿದ್ಧಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |