Urdu   /   English   /   Nawayathi

ಏ.12ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ

share with us

ಮೈಸೂರು: 02 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏ.12ರಂದು ಬಿಡುಗಡೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತಿತರ ಮುಖಂಡರು ಸೇರಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ವರಿಷ್ಠರಿಗೆ ಕಳುಹಿಸಿದ್ದೇವೆ. 12ರಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು. ಆಕಾಂಕ್ಷಿಗಳು ಬಹಳಷ್ಟು ಇದ್ದಾರೆ. ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ. ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆಯೂ ಇದೆ ಎಂದರು. ಜೆಡಿಎಸ್‍ಗೆ ವೋಟು ಹಾಕಿದರೆ ಅದು ಕಾಂಗ್ರೆಸ್‍ಗೆ ಹಾಕಿದಂತೆ ಎಂದು ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರಲ್ಲಾ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಹೇಳುತ್ತೇನೆ ಜೆಡಿಎಸ್‍ಗೆ ಮತ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ. ಈ ಮೂಲಕ ಕೋಮುವಾದಿ ಪಕ್ಷವನ್ನು ಬೆಂಬಲಿಸಿದಂತೆ. ಹಾಗಾಗಿ ಮತದಾರರು ಜೆಡಿಎಸ್‍ಅನ್ನು ಬೆಂಬಲಿಸಬಾರದು ಎಂದು ಮನವಿ ಮಾಡಿದರು.

ಮಾತಿನ ಚಕಮಕಿ: ಸಿಎಂ ನಿವಾಸದ ಬಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಉದ್ಬೂರು ಗ್ರಾಮಸ್ಥರು ಆಗಮಿಸಿದ್ದ ವೇಳೆ ಪೊಲೀಸರು ಅವಕಾಶ ನೀಡಲಿಲ್ಲ. ಇದರಿಂದ ಸಿಟ್ಟಿಗೆದ್ದ ಜನರು ಮಾತಿನ ಚಕಮಕಿ ನಡೆಸಿದರು.  ಈ ವೇಳೆ ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ವಾಗ್ವಾದ ನಡೆಸಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲೇಬೇಕೆಂದು ಒತ್ತಡ ಹಾಕಿದರು. ಪ್ರಯೋಜನವಾಗದ ಕಾರಣ ಪೊಲೀಸರಿಗೆ ಹಿಡಿಶಾಪ ಹಾಕುತ್ತ ತೆರಳಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا