Urdu   /   English   /   Nawayathi

ಭೀಕರ ಅಪಘಾತ 7 ಸಾವು : ಮೃತರೆಲ್ಲಾ ಬೆಂಗಳೂರಿನ ಒಂದೇ ಕುಟುಂಬದವರು

share with us

ರಾಜಾಪಾಲಯಂ,(ತಮಿಳುನಾಡು): 07 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಸಕ್ಕರೆ ಮೂಟೆಗಳನ್ನು ತುಂಬಿದ್ದ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ 7 ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದು, ಇನ್ನಿಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ತಮಿಳುನಾಡಿನ ವಿರುಧ ನಗರ ಜಿಲ್ಲೆಯ ರಾಜಾಪಾಲಯಂ ಬಳಿ ಇಂದು ಮುಂಜಾನೆ ಸಂಭವಿಸಿದೆ.

  • ತಮಿಳುನಾಡಿನ ರಾಜಾಪಾಲಯಂ ಬಳಿ ಭೀಕರ ಅಪಘಾತ
  • ಬೆಂಗಳೂರಿನ ಒಂದೇ ಕುಟುಂಬದ 7 ಮಂದಿ ಸಾವು
  • ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
  • ಮೃತ ವಿವರ ಸದ್ಯಕ್ಕೆ ತಿಳಿದುಬಂದಿಲ್ಲ
  • ಘಟನೆಯ ಬಗ್ಗೆ ಪೊಲೀಸರಿಂದ ತನಿಖೆ

ಬೆಂಗಳೂರಿನ ಸಂಗಣ್ಣಗೌಡ ಕುಟುಂಬ ತಮಿಳುನಾಡಿನ ವಿವಿಧ ಭಾಗಗಳಿಗೆ ಪ್ರವಾಸಕ್ಕೆ ತೆರಳಿ ವಾಪಸ್ಸು ಬರುತ್ತಿದ್ದ ವೇಳೆ ಕಲ್ಲಕುರುಚಿಯಿಂದ ತೆಂಗಾಸಿ ಕಡೆ ತೆರಳುತ್ತಿದ್ದ ಸಕ್ಕರೆ ಲೋಡ್ ತುಂಬಿದ್ದ ಲಾರಿ ಮತ್ತು  ಕಾರು  ಮುಖಾಮುಖಿ ಡಿಕ್ಕಿ ಸಂಭವಿಸಿದ  ಹಿನ್ನೆಲೆಯಲ್ಲಿ ಈ ದುರ್ಘಟನೆ ಸೇತು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸ್ಥಳದಲ್ಲಿ ಇಬ್ಬರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಧುರೈ ಆಸ್ಪತ್ರೆಗೆ ದಾಖಲಿಸಿಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ.

ಮೃತಪಟ್ಟ ಕುಟುಂಬದ ಸದಸ್ಯರು ಬೆಂಗಳೂರಿನ ನಿವಾಸಿಗಳು ಎಂದು ತಿಳಿದು ಬಂದಿದ್ದು, ಮೃತಪಟ್ಟವರ ಹೆಸರು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜರಾಜನ್ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ನಂತರವೇ ವಿಷಯ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಚಾಲಕರ ಅತೀವೇಗ ಅಥವಾ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಅಥವಾ ಇಲ್ಲವೇ ಎನ್ನುವುದು ತನಿಖೆ ನಂತರ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಪೋಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಳಿಗೆ ಕಳುಹಿಸಲಾಗಿದ್ದು, ಮೃತರ ವಿವರಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا