Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 17 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದೇಶಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ. ಕಥುವಾದಲ್ಲಿ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಆ ಬಾಲಕಿಯ ಹೆಸರನ್ನು ತನ್ನ ಮಗಳು ಪೃಥ್ವಿ ಹೆಸರಿನ ಜತೆ ಸೇರಿಸಿ ಕರೆಯುವುದಾಗಿ ಕೆಪಿಸಿಸಿ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿಕೆ ನೀಡಿದ್ದಾರೆ.
ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಬಿಜೆಪಿಯ ಹಿಂದೂಗಳೆನಿಸಿಕೊಂಡವರು ಪ್ರತಿಭಟನೆ ಮಾಡಬಹುದು. ಕಾರು, ಮನೆಗೆ ಕಲ್ಲು ತೂರಾಟವೂ ನಡೆಯಬಹುದು ಎಂದರು.
ದ.ಕ.ದಲ್ಲೂ ನಿರಂತರ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಪಬ್ ದಾಳಿ, ಹೋಂಸ್ಟೇ ದಾಳಿ ಹೆಸರಿನಲ್ಲಿ ಬಿಜೆಪಿಯ ಹಿಂದೂಗಳು ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ನಾನು ಹಿಂದೂವಾಗಿದ್ದರೂ ಬಿಜೆಪಿಯ ಹಿಂದೂಗಳೆದುರು ಹಿಂದೂ ಎನ್ನಲು ನಾಚಿಕೆಯಾಗುತ್ತಿದೆ ಎಂದರು.
ನನ್ನ ಮೇಲೂ ಹಲ್ಲೆ ನಡೆದಿತ್ತು
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಕೆರೆ ಪರಿಸರದಲ್ಲಿ ನಾನು ಪ್ರಚಾರಕ್ಕೆ ಹೋದ ಸಂದರ್ಭ ಅಲ್ಲಿನ ಕೆಲವು ಬಿಜೆಪಿಯ ಹಿಂದೂಗಳು ತಡೆದು,ಹಲ್ಲೆ ನಡೆಸಿದ್ದರು. ಪ್ರಕರಣ ನ್ಯಾಯಾಲಯದಲ್ಲಿದೆ. ನನ್ನ ಮನೆಯ ಬಳಿ ಬಂದು ಬೆದರಿಕೆಯನ್ನೂ ಒಡ್ಡಿದ್ದಾರೆ. ಅದರ ವೀಡಿಯೋ ನನ್ನ ಬಳಿ ಇದೆ ಎಂದು ಕೆಲವು ವೀಡಿಯೋಗಳನ್ನು ಪ್ರದರ್ಶಿಸಿದರು.
ಬಿಜೆಪಿಯ ಹಿಂದೂಗಳು ನನ್ನ ಜತೆ ಅನೇಕ ಬಾರಿ ಅಶ್ಲೀಲವಾಗಿ ವರ್ತಿಸಿದ್ದಾರೆ. ಈ ಕುರಿತು ಹಲವು ದೂರುಗಳನ್ನು ನೀಡಲಾಗಿದೆ. ಬೇಟಿ ಬಚಾವೊ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದರೂ ಕಳೆದ 5 ವರ್ಷಗಳಲ್ಲಿ ಹೆಚ್ಚಿನ ಮಹಿಳಾ ದೌರ್ಜನ್ಯ ಪ್ರಕರಣಗಳು ನಡೆದಿವೆ. ತಮ್ಮ ಕುಟುಂಬದ ಮಹಿಳೆಯರ ಜತೆ ಜೀವಿಸದ ಮೋದಿ, ಯೋಗಿ ಅವರಿಗೆ ಮಹಿಳೆಯರ ನೋವು ಅರ್ಥವಾಗುವುದಿಲ್ಲ ಎಂದರು.
ಕಥುವಾ ಬಾಲಕಿಯ ಹೆಸರು, ಭಾವಚಿತ್ರ ಬಳಸದಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಪ್ರತಿಭಾ ನಾನು ಯಾಕೆ ಹೆಸರು ಬಳಸಬಾರದು ಎಂದು ಪದೇ ಪದೇ ಬಾಲಕಿಯ ಹೆಸರನ್ನು ಬಳಸಿದರು. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇನೆ. ಈ ಕುರಿತು ನನ್ನ ವಿರುದ್ಧ ಯಾರಾದರೂ ದೂರು ನೀಡಿದರೆ ನೀಡಲಿ ಎಂದು ತಿಳಿಸಿದರು. ಜತೆಗೆ ತನ್ನ ಮಗಳು ಪೃಥ್ವಿಯನ್ನೂ ಪತ್ರಿಕಾಗೋಷ್ಠಿಯಲ್ಲಿ ಕೂರಿಸಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಲತಾ ಸಾಲ್ಯಾನ್, ಜೆಸಿಂತಾ ಡಿ'ಸೋಜಾ, ಶಕುಂತಳಾ ಕಾಮತ್ ಉಪಸ್ಥಿತರಿದ್ದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |