Urdu   /   English   /   Nawayathi

ಬಾದಾಮಿ ಸ್ಪರ್ಧೆ: ಸಿಎಂ ಸಿಡಿಮಿಡಿ

share with us

ಮೈಸೂರು: 19 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ನನಗಾಗಲಿ ಇಲ್ಲವೆ ಅಲ್ಲಿನ ಜನರಲ್ಲಾಗಲಿ ಯಾವುದೇ ಗೊಂದಲಗಳಿಲ್ಲ.ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಆಸೆಯನ್ನೂ ಜೀವಂತವಾಗಿರಿಸಿಕೊಂಡಿದ್ದಾರೆ. ಗೊಂದಲಗಳಿರುವುದು ನಿಮ್ಮಲ್ಲಿ (ಮಾಧ್ಯಮ), ನನ್ನಲ್ಲಿ ಯಾವುದೇ ಗೊಂದಲವಿಲ್ಲ.ಪದೇ ಪದೇ ಈ ವಿಷಯ ಯಾಕೆ ಪ್ರಸ್ತಾಪ ಮಾಡುತ್ತೀರಾ ಎಂದು ಪತ್ರಕರ್ತರ ವಿರುದ್ದ ಹರಿಹಾಯ್ದರು.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಾಮುಂಡೇಶ್ವರಿ ಕ್ಷೇತ್ರದಿಂದ ತಾವು ಸ್ಪಧೆ ಮಾಡಲು ಹೈ ಕಮಾಂಡ್ ಒಪ್ಪಿಗೆ ನೀಡಿದೆ. ಬಾದಾಮಿಯಿಂದಲೂ ಸ್ಪರ್ಧಿಸುವಂತೆ ಅಲ್ಲಿನ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದರು.

ನಾನೇನು ಹೈಕಮಾಂಡ್ ಅಲ್ಲ. ಮುಖ್ಯಮಂತ್ರಿ ಅಷ್ಟೆ. ನಾನು ಎಲ್ಲಿಂದ ಸ್ಪರ್ಧೆ ಮಾಡಬೇಕು ಎನ್ನುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತೀರಾ ಎಂದು ಮರು ಪ್ರಶ್ನಿಸಿದರು.

ರಾಜೇಶ್‌ಗೆ ಟಿಕೆಟ್:

ಜಗಳೂರು ಕ್ಷೇತ್ರದಿಂದ ಟಿಕೆಟ್ ವಂಚಿತ ಶಾಸಕ ಹೆಚ್.ಪಿ ರಾಜೇಶ್ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಮುಂಚೆ ಟಿಕೆಟ್ ನೀಡಿದ್ದ ಪುಷ್ಟಾ ಅವರೊಂದಿಗೆ ಮಾತುಕತೆ ನಡೆಸಿ ಸಮಾಧಾನ ಮಾಡಲಾಗಿದೆ ಎಂದರು.

ಇನ್ನುಳಿದ ಟಿಕೆಟ್ ವಂಚಿತ ಶಾಸಕರಿಗೆ ಟಿಕೆಟ್ ನೀಡುವ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದರು.

ರಾಜ್ಯಪ್ರವಾಸ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಂತರ ರಾಜ್ಯಧ್ಯಂತ ಪ್ರಚಾರ ಕೈಗೊಳ್ಳುತ್ತೇನೆ.ಇದುವರೆಗೂ ಯಾವ ಕ್ಷೇತ್ರದಲ್ಲಿ ಪ್ರಚಾರ ಮಾಡಿಲ್ಲ ಅಂತಹ ಕ್ಷೇತ್ರಗಳು ಮತ್ತು ಕಠಿಣ ಪರಿಸ್ಥಿತಿ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا