Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 19 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಶಿಕಾರಿಪುರದಲ್ಲೊಬ್ಬ ಹೆಣ್ಣುಬಾಕ ಇದ್ದಾನೆ. ಅವನ ಸಿಡಿ ಹಾಲಪ್ಪಗೆ ಸಿಕ್ಕಿರಬೇಕು. ಅದನ್ನೇ ತೋರಿಸಿ ಹೆದರಿಸಿ ಟಿಕೆಟ್ ಗಿಟ್ಟಿಸಿದ್ದಾನೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೋಪಾಲಕೃಷ್ಣ, ಶಿಕಾರಿಪುರದಲ್ಲೊಬ್ಬ ಕಾಮುಕ, ಕಾಮುಕ ಅಲ್ಲ ಹೆಣ್ಣು ಬಾಕ ಇದ್ದಾನೆ. ಬಹುಷಃ ಅವನ ಸಿಡಿ ಹಾಲಪ್ಪನಿಗೆ ಸಿಕ್ಕಿರಬೇಕು. ಅದನ್ನು ಮುಂದಿಟ್ಟುಕೊಂಡು ಟಿಕೆಟ್ ಪಡೆದಿದ್ದಾನೆ ಏಕವಚನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಿಂದ ಬಂದವರಿಗೆಲ್ಲಾ ಟಿಕೆಟ್ ನೀಡಲಾಗಿದೆ. ನಾನು ಬಿಜೆಪಿಗೆ ನಿಷ್ಠನಾಗಿದ್ದು ಕೆಜೆಪಿಗೆ ಹಾರದೇ ಇದ್ದದ್ದಕ್ಕೆ ಈಗ ಶಿಕ್ಷೆ ನೀಡಲಾಗಿದೆ. ನಮ್ಮ ಕಾರ್ಯಕರ್ತರ ಶಾಪ ಯಡಿಯೂರಪ್ಪನವರಿಗೆ ತಟ್ಟದೆ ಇರದು. ನನಗೆ ಜೆಡಿಎಸ್ನಿಂದ ಬುಲಾವ್ ಬಂದಿದೆ ಆದರೆ ನಾನು ಹೋಗುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನನ್ನ ಬಲವನ್ನು ಯಡಿಯೂರಪ್ಪನವರಿಗೆ ಸಾಬೀತು ಮಾಡುತ್ತೇನೆ. ಹಾಲಪ್ಪನನ್ನು ಸೋಲಿಸುವುದೇ ನನ್ನ ಗುರಿ ಎಂದಿದ್ದಾರೆ.
ಸಾಗರದ ಹೆಣ್ಣು ಮಕ್ಕಳು ಅತ್ಯಾಚಾರಿಗೆ ಟಿಕೆಟ್ ಕೊಟ್ಟಿದ್ದರಿಂದ ಛೀ.. ಥೂ.. ಅಂತಿದ್ದಾರೆ. ನನಗೆ ಟಿಕೆಟ್ ಕೈ ತಪ್ಪಲು ಯಡಿಯೂರಪ್ಪ ಹಾಗೂ ಅವರ ಮಗ ರಾಘವೇಂದ್ರ ಕಾರಣ. ನನ್ನ ರಾಜಕೀಯ ಗುರು ಬಂಗಾರಪ್ಪನವರನ್ನ ಎದುರು ಹಾಕಿಕೊಂಡು ಬಿವೈ ರಾಘವೇಂದ್ರ ಪರ ಪ್ರಚಾರ ನಡೆಸಿದ್ದರಿಂದ ಅಂದು ಅವರು ಗೆಲುವನ್ನು ಕಂಡಿದ್ದಾರೆ. ರಾಜ್ಯದಲ್ಲಿ ಯಾರ ಮೇಲಾದರು ಐಟಿ ರೇಡ್ ಮಾಡುವುದಿದ್ದರೆ ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ಮಾಡಲಿ. ಎಲ್ಲರ ದುಡ್ಡನ್ನ ಬಾಚಿ ಹಾಕಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಗೊತ್ತಾಗಿ ಎಲ್ಲ ಕಡೆಯಿಂದಲೂ ಸಾಧ್ಯವಾದಷ್ಟು ದುಡ್ಡು ಬಾಚಿಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೋಶವನ್ನು ಹೊರ ಹಾಕಿದರು.
ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂಡಾಯ ಶಾಸಕನಾಗಿ ಸಾಗರ ಕ್ಷೇತ್ರದಿಂದ ಸ್ವರ್ಧಿಸುತ್ತಿದ್ದೇನೆ. ಶಿವಮೊಗ್ಗ ರಾಜಕಾರಣದಲ್ಲಿ ಯಡಿಯೂರಪ್ಪನೋ ಅಥವಾ ಬೇಳೂರು ಗೋಪಾಲಕೃಷ್ಣನೋ ನೋಡೆ ಬಿಡೋಣ. ಸಾಗರದ ಜನ ಬೇಳೂರು ಗೋಪಾಲಕೃಷ್ಣ ಜೊತೆಗಿದ್ದಾರೆ. ಸಾಗರದ ಎಲ್ಲಾ ನನ್ನ ಜನತೆಯ ಜೊತೆ ಮಾತಾಡಿ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುತ್ತೇನೆ ಎಂದು ಅವರು ಸವಾಲೆಸದರು.
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |