Urdu   /   English   /   Nawayathi

ದಿಢೀರ್ ಬೆಳವಣಿಗೆ; ವರುಣಾದಿಂದ BSY ಪುತ್ರ ವಿಜಯೇಂದ್ರ ಸ್ಪರ್ಧೆ ಇಲ್ಲ

share with us

ಮೈಸೂರು/ಬೆಂಗಳೂರು: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕೊನೆಯ ಪಟ್ಟಿ ಬಿಡುಗಡೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಬೆಳವಣಿಗೆಗೆ ಸಾಕ್ಷಿಯಾಗಿದೆ. ಹೈವೋಲ್ಟೇಜ್ ನ ವರುಣಾ ಕ್ಷೇತ್ರದಲ್ಲಿ ಇದೀಗ ಮುಖ್ಯಮಂತ್ರಿ ಪುತ್ರ ಡಾ.ಯತೀಂದ್ರ ವಿರುದ್ಧ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ ಅನುಮಾನ ಎಂಬ ಮಾಹಿತಿ ಹರಿದಾಡುತ್ತಿದೆ. ನಾವು ಸೂಚನೆ ನೀಡುವವರೆಗೂ ಅಂತಿಮ ಪಟ್ಟಿಯ ಹೆಸರನ್ನು ಬಿಡುಗಡೆ ಮಾಡಬೇಡಿ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ. ಮತ್ತೊಂದೆಡೆ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಸಂಜೆಯೊಳಗೆ ತೆರೆ ಬೀಳಲಿದೆ.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧಿಸೋದಿಲ್ಲ: ಬಿಎಸ್ ವೈ

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಅನುಮಾನ ಎಂಬ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಮತ್ತೊಂದೆಡೆ ನಂಜನಗೂಡು ಸಮಾವೇಶದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ವರುಣಾದಲ್ಲಿ ನನ್ನ ಮಗ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ, ಬದಲಿಗೆ ಸಾಮಾನ್ಯ ಬಿಜೆಪಿ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ ಎಂದು ಹೇಳಿದ ನಂತರ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ವಿಜಯೇಂದ್ರಗೆ ಟಿಕೆಟ್ ಕೊಡುವಂತೆ ಆಗ್ರಹಿಸಿದ ಘಟನೆ ನಡೆಯಿತು. ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا