Urdu   /   English   /   Nawayathi

ಪದ್ಮನಾಭನಗರ ಕ್ಷೇತ್ರದಲ್ಲಿ ಎಂ.ಶ್ರೀನಿವಾಸ್ ಪರ ಮಾಜಿ ಕ್ರಿಕೆಟಿಗ ಅಜರುದ್ದೀನ್ ಬ್ಯಾಟಿಂಗ್

share with us

ಬೆಂಗಳೂರು: 07 ಮೇ (ಫಿಕ್ರೋಖಬರ್ ಸುದ್ದಿ) ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವಿವೇಕಾನಂದ ಕಾಲೋನಿ, ಉಮರ್ ಬಾಗ್, ಪ್ರಗತಿಪರ, ಗಂಗಾವತಿ ನಗರ ಮತ್ತಿತರ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಅವರ ಪರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜರುದ್ದೀನ್ ಭರ್ಜರಿ ಬ್ಯಾಟಿಂಗ್ ನಡೆಸಿದರು.
ಕಳೆದ 40 ವರ್ಷಗಳಿಂದ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಹಿರಿಯ ನಾಯಕರಾದ ಎಂ.ಶ್ರೀನಿವಾಸ್ ಅವರಂತಹ ಮುತ್ಸದ್ಧಿ ರಾಜಕಾರಣಿಯಿಂದ ಮಾತ್ರ ಪದ್ಮನಾಭ ನಗರ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು.

ಕಳೆದ ಹಲವಾರು ವರ್ಷಗಳಿಂದ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿರುವ ವ್ಯಕ್ತಿಯಿಂದ ಇದುವರೆಗೂ ಯಾವುದೇ ಅಭಿವೃದ್ಧಿಯಾಗಿಲ್ಲ. ಹೀಗಾಗಿ ಇಡೀ ಕ್ಷೇತ್ರ ಹಿಂದುಳಿದಿದೆ. ಇಂತಹ ವಾತಾವರಣ ಹೋಗಿಸಬೇಕಾದರೆ ಎಂ.ಶ್ರೀನಿವಾಸ್ ಅವರನ್ನು ಈ ಬಾರಿ ಜಯ ಗಳಿಸಬೇಕು ಎಂದು ಅಜರುದ್ದೀನ್ ಮನವಿ ಮಾಡಿಕೊಂಡರು.

ಅಭ್ಯರ್ಥಿ ಎಂ.ಶ್ರೀನಿವಾಸ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗದೇ ಜನ ಭ್ರಮ ನಿರಸನಗೊಂಡಿದ್ದಾರೆ. ಇನ್ನು ಮುಂದೆ ನಿಮಗೆ ನಿರಾಸೆಯಾಗಲು ನಾನು ಬಿಡುವುದಿಲ್ಲ. ಈ ಬಾರಿ ನನ್ನನ್ನು ಗೆಲ್ಲಿಸಿದರೆ ದಿನದ 24 ಗಂಟೆಗಳ ಕಾಲ ನಿಮ್ಮ ಋಣ ತೀರಿಸಲು ಶ್ರಮಿಸುತ್ತೇನೆ ಎಂದರು. ಪ್ರಚಾರ ಸಂದರ್ಭದಲ್ಲಿ ಬನಶಂಕರಿ ವಾರ್ಡ್ ಬಿಬಿಎಂಪಿ ಸದಸ್ಯ ಅನ್ಸರ್ ಪಾಷ ಮತ್ತಿತರ ಕಾಂಗ್ರೆಸ್ ಮುಖಂಡರು ಜತೆಗಿದ್ದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا