Urdu   /   English   /   Nawayathi

ಕಾವೇರಿ ವಿವಾದ : ರಜನೀಕಾಂತ್‌ ಕರ್ನಾಟಕ ಭೇಟಿಗೆ ಎಚ್‌ಡಿಕೆ ಆಹ್ವಾನ

share with us

ಬೆಂಗಳೂರು: 21 ಮೇ (ಫಿಕ್ರೋಖಬರ್ ಸುದ್ದಿ) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಮುನ್ನವೇ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ತಮ್ಮ ಕಾರ್ಯಭಾರವನ್ನು ಆರಂಭಸಿರುವಂತಿದೆ. ರಾಜ್ಯದಲ್ಲಿನ ಜಲಾಶಯಗಳ ಸ್ಥಿತಿಗತಿಯನ್ನು ಕಣ್ಣಾರೆ ಕಂಡು ನಿಜ ಪರಿಸ್ಥಿತಿಯನ್ನು ಅರಿತುಕೊಳ್ಳುವ ಸಲುವಾಗಿ ಕರ್ನಾಟಕಕ್ಕೆ ಭೇಟಿ ನೀಡುವಂತೆ ಕುಮಾರಸ್ವಾಮಿ ಅವರು ತಮಿಳು ಸೂಪರ್‌ಸ್ಟಾರ್‌ ರಜನೀಕಾಂತ್‌ ಅವರನ್ನು ಅಹ್ವಾನಿಸಿದ್ದಾರೆ.

ತಮಿಳು ನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ರಜನೀಕಾಂತ್‌ ಒತ್ತಾಯಿಸಿರುವುದಕ್ಕೆ ಪ್ರತಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, "ರಾಜ್ಯದಲ್ಲಿನ ಜಲಾಶಯಗಳ ಸ್ಥಿತಿಗತಿಯನ್ನು ಅರಿಯುವ ಸಲುವಾಗಿ ಕರ್ನಾಟಕಕ್ಕೆ ಒಮ್ಮೆ ಭೇಟಿ ಕೊಡಿ ಎಂದು ನಾನು ರಜನೀಕಾಂತ್‌ ಅವರನ್ನು ಆಹ್ವಾನಿಸಿದ್ದೇನೆ'' ಎಂದು ಹೇಳಿದರು. 

ರಜನೀಕಾಂತ್‌ ಅವರು ಕರ್ನಾಟಕಕ್ಕೆ ಭೇಟಿಕೊಟ್ಟು ಇಲ್ಲಿನ ಜಲಾಶಯಗಳ ಸ್ಥಿತಿಗತಿಯನ್ನು ಕಣ್ಣಾರೆ ಕಂಡರೆ ಅವರಿಗೆ ನಿಜಸ್ಥಿತಿಯ ಅರಿವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. 

ರಾಜ್ಯದಲ್ಲಿನ್ನೂ ಅಸ್ತಿತ್ವಕ್ಕೆ ಬರಬೇಕಾಗಿರುವ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಹೊಸ ಸರಕಾರ ತಮಿಳು ನಾಡಿಗೆ ಕೂಡಲೇ ನೀರು ಬಿಡಬೇಕು ಎಂದು ರಜನೀಕಾಂತ್‌ ಆಗ್ರಹಿಸಿದ್ದರು. ಅವರ ಈ ಬೇಡಿಕೆಯನ್ನು ನಿನ್ನೆ ಭಾನುವಾರ ಕುಮಾರಸ್ವಾಮಿ ಆಕ್ಷೇಪಿಸಿದ್ದರು. 

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا