Urdu   /   English   /   Nawayathi

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ಯುವಕರು

share with us

ಹೊಸಪೇಟೆ: 23 ಮೇ (ಫಿಕ್ರೋಖಬರ್ ಸುದ್ದಿ) ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಬುಧವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಪೆದ್ದಟೂರು ಗ್ರಾಮದ ವಿನಯ (19) ಹಾಗೂ ನವೀನ್‌ (18) ಮೃತಪಟ್ಟವರು.

‘ಗ್ರಾಮದಿಂದ ಸುಮಾರು 40ಕ್ಕೂ ಹೆಚ್ಚು ಜನ ಹಂಪಿಗೆ ಬಂದಿದ್ದರು. ಸ್ಥಳೀಯರು ನೀಡಿದ ಎಚ್ಚರಿಕೆಯನ್ನು ಗಮನಿಸದೆ ಸ್ನಾನಘಟ್ಟದಿಂದ ತುಂಗಭದ್ರಾ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ನುರಿತ ಈಜುಗಾರರು ಶವಗಳ ಶೋಧ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا