Urdu   /   English   /   Nawayathi

37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ? ದೇವೇಗೌಡ ಪ್ರಶ್ನೆ

share with us

ಬೆಂಗಳೂರು: 23 ಮೇ (ಫಿಕ್ರೋಖಬರ್ ಸುದ್ದಿ) ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇದ್ದಾರೆ. ಅವರೊಂದಿಗೆ ಚರ್ಚಿಸಿ ಕುಮಾರಸ್ವಾಮಿ ಸಾಲಮನ್ನಾ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ? ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ಸಾಲಮನ್ನಾ ಮಾಡಬೇಕಷ್ಟೆ. ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ?  ಎಂದು ದೇವೇಗೌಡರು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಎನ್ನುವುದಕ್ಕಿಂತ ಹೆಚ್ಚಾಗಿ ತಂದೆ ತಾಯಿಯಾಗಿ ಕುಮಾರಸ್ವಾಮಿಗೆ ಅರ್ಶಿವಾದ ಮಾಡುತ್ತಿದ್ದೇವೆ. ಇದು ತಂದೆ ತಾಯಿಗಳಾದ ನಮ್ಮ ಕರ್ತವ್ಯ ಎಂದರು.

ತೃತೀಯ ರಂಗದ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ದೇವೇಗೌಡರು ಪದ್ಮನಾಭ ನಗರದಲ್ಲಿನ ತಮ್ಮ ಮನೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا