Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಡುಪಿ: 04 ಜೂನ್ (ಫಿಕ್ರೋಖಬರ್ ಸುದ್ದಿ) ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ(61) ಶಂಕಾಸ್ಪದ ಸಾವಿನ ಪ್ರಕರಣದಲ್ಲಿ ಬಂಧಿತ ಹಿರಿಯಡ್ಕ ಎಸ್ಸೈ ಮತ್ತು ಇಬ್ಬರು ಪೊಲೀಸ್ ಸಿಬಂದಿಯನ್ನು ಕಾರವಾರ ಜೈಲಿನಲ್ಲಿ ಇರಿಸಲಾಗಿದೆ. ಜೂನ್ 3ರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ಆರೋಪಿಗಳನ್ನು ಕಾರವಾರ ಜೈಲಿನಲ್ಲಿ ಇರಿಸುವಂತೆ ಸೂಚಿಸಲಾಗಿದ್ದು, ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಾಗುವುದು.
ಹಿರಿಯಡ್ಕ ಎಸ್ಸೈ ಡಿ.ಎನ್. ಕುಮಾರ್, ಠಾಣೆಯ ಜೀಪ್ ಚಾಲಕ ಗೋಪಾಲ, ಎಚ್. ಸಿ ಮೋಹನ ಕೊತ್ವಾಲ, ಬಜರಂಗದಳ ಕಾರ್ಯಕರ್ತರಾದ ಪೆರ್ಡೂರು ಪಕಾಲುವಿನ ಚೇತನ್ ಯಾನೆ ಚೇತನ್ ಆಚಾರ್ಯ(22), ಪೆರ್ಡೂರು ಅಲಂಗಾರು ನಿವಾಸಿ ಶೈಲೇಶ ಶೆಟ್ಟಿ(20). ಪೆರ್ಡೂರು ಕೆನ್ನೆತ್ ಬೈಲುವಿನ ಗಣೇಶ ನಾಯ್ಕ(24) ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಬಜರಂಗದಳ ಕಾರ್ಯಕರ್ತರೊಂದಿಗೆ ಹಿರಿಯಡ್ಕ ಪೊಲೀಸರು ಶೇನರಬೆಟ್ಟು ಎಂಬಲ್ಲಿ ಬೆಳಿಗ್ಗೆ ನಾಲ್ಕು ಗಂಟೆಗೆ ದನ ಸಾಗಾಟ ವಾಹನಕ್ಕೆ ಕಾದು ಕೂತಿದ್ದರು. ಈ ವೇಳೆ ಬಂದ ಸ್ಕಾರ್ಪಿಯೊವನ್ನು ಪೊಲೀಸರ ಎದುರೇ ಬಜರಂಗಿಗಳು ತಡೆದಿದ್ದರು. ಅದರಲ್ಲಿದ್ದ ಇಬ್ಬರು ಓಡಿ ಪಾರಾಗಿದ್ದರು. ವಯೋವೃದ್ಧ ಹುಸೈನಬ್ಬ ಅವರು ಬಜರಂಗಿ ಗುಂಪಿಗೆ ಏಕಾಂಗಿಯಾಗಿ ಸಿಕ್ಕಿದ್ದು ಅವರನ್ನು ಬಜರಂಗದಳ ಕಾರ್ಯಕರ್ತರು ಮನಸೇಚ್ಚೆ ಥಳಿಸಿ, ಸ್ಕಾರ್ಪಿಯೊವನ್ನು ಜಖಂಗೊಳಿಸಿದರು.
ಹಲ್ಲೆಗೈದ ಬಳಿಕ ಹುಸೈನಬ್ಬ ಅವರನ್ನು ಪೊಲೀಸರಿಗೆ ನೀಡಿದ್ದರು. ಈ ವೇಳೆ ಜೀಪಿನ ಹಿಂಬದಿ ಇದ್ದ ಹುಸೈನಬ್ಬ ಅಲ್ಲೇ ಸಾವಪ್ಪಿದ್ದರು. ದನ ಸಾಗಾಟದ ಸ್ಕಾರ್ಪಿಯೊವನ್ನು ಸುರೇಶ್ ಮೆಂಡನ್ ಮತ್ತು ಇತರ ಆರೋಪಿಗಳು ಠಾಣೆಗೆ ತಂದಿದ್ದರು ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಜರಂಗಿಗಳಿಂದ ಹಲ್ಲೆಗೊಳಗಾಗಿದ್ದ ಹುಸೈನಬ್ಬ ಅವರು ಪೊಲೀಸ್ ಜೀಪಿನಲ್ಲೇ ಸಾವಪ್ಪಿರುವುದು ತನಿಖೆಯಿಂದ ಬಯಲಾಗುವ ಮೂಲಕ ಕರಾವಳಿಯಲ್ಲಿ ಹಲವು ಪೊಲೀಸರು ಸಂಘಪರಿವಾರದ ಕಾರ್ಯಕರ್ತರೊಂದಿಗೆ ಕೈಮಿಲಾಯಿಸಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಠಿ ಬಂದಿದೆ.
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |