Urdu   /   English   /   Nawayathi

ಜೆಎನ್‍ಯು ವಿದ್ಯಾರ್ಥಿ ಮುಖಂಡನಿಗೆ ರವಿ ಪೂಜಾರಿ ಜೀವ ಬೆದರಿಕೆ

share with us

ನವದೆಹಲಿ: 09 ಜೂನ್ (ಫಿಕ್ರೋಖಬರ್ ಸುದ್ದಿ) ದಲಿತ ಮುಖಂಡ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ಭೂಗತ ಪಾತಕಿ ರವಿ ಪೂಜಾರಿ ಇದೀಗ ಜೆಎನ್‍ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್‍ಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ನೀನು ದೇಶ ಬಿಡದಿದ್ದರೆ ನಿನ್ನ ಪ್ರಾಣ ತೆಗೆಯುತ್ತೇವೆ ಎಂದು ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ನನಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾನೆ.

ಭೂಗತ ಪಾತಕಿಗಳ ಬೆದರಿಕೆಯಿರುವ ಹಿನ್ನೆಲೆಯಲ್ಲಿ ನಾನು ಪೊಲೀಸ್ ಭದ್ರತೆ ಕೇಳಿದ್ದೇನೆ ಎಂದು ಖಾಲಿದ್ ಟ್ವಿಟ್ ಮಾಡಿದ್ದಾರೆ. ಕಳೆದ ವರ್ಷವೂ ಇದೇ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಖಾಲಿದ್ ಸ್ಪಷ್ಟಪಡಿಸಿದ್ದಾರೆ. ಖಾಲಿದ್ ನೀಡಿರುವ ದೂರು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಸಂಸತ್ ಮೇಲಿನ ದಾಳಿ ರೂವಾರಿ ಅಫ್ಜಲ್ ಗುರುವನ್ನು ನೇಣಿಗೇರಿಸಿದ ದಿನ ಜೆಎನ್‍ಯು ವಿಶ್ವವಿದ್ಯಾಲಯದ ಆವರಣದಲ್ಲಿ ದೇಶದ್ರೋಹಿ ಪರ ಘೋಷಣೆ ಕೂಗಿದ ಆರೋಪದ ಮೇಲೆ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕನ್ನಯ್ಯಕುಮಾರ್, ಅನಿರ್ಬಾನ್ ಭಟ್ಟಾಚಾರ್ಯ ಹಾಗೂ ಉಮರ್ ಖಾಲಿದ್ ವಿರುದ್ಧ ದೇಶದ್ರೋಹ ಆರೋಪ ಹೊರಿಸಲಾಗಿತ್ತು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا