Urdu   /   English   /   Nawayathi

ಪುಷ್ಪಗಿರಿ ಬೆಟ್ಟದ ಬಳಿ ಹೊತ್ತಿ ಉರಿದ ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರ ದೇಹಗಳು

share with us

ಹಾಸನ: 09 ಜೂನ್ (ಫಿಕ್ರೋಖಬರ್ ಸುದ್ದಿ) ಬೇಲೂರು ತಾಲ್ಲೂಕಿನ ಪುಷ್ಪಗಿರಿ ಬೆಟ್ಟದ ಬಳಿ ಶುಕ್ರವಾರ ರಾತ್ರಿ ಕಾರೊಂದು ಹೊತ್ತಿ ಉರಿದಿದ್ದು, ಇಬ್ಬರ ದೇಹಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ‘ಐ10’ ಕಾರು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟಿದೆ. ಕಾರಿನೊಳಗೆ ಎರಡು ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನೊಳಗೆ ಇದ್ದವರ ಗುರುತು ಸಿಕ್ಕಿಲ್ಲ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا