Urdu   /   English   /   Nawayathi

ಪೆಟ್ರೋಲ್ ಬಂಕ್‌ಗೆ ನುಗ್ಗಿದ ಬಸ್ ತಪ್ಪಿದ ಅನಾಹುತ

share with us

ಬೆಂಗಳೂರು: 12 ಜೂನ್ (ಫಿಕ್ರೋಖಬರ್ ಸುದ್ದಿ) ಚಲಿಸುತಿದ್ದ ವೇಳೆ ಬ್ರೇಕ್ ವೈಫಲ್ಯಗೊಂಡು ಸ್ಟೇರಿಂಗ್ ಲಾಕ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪೆಟ್ರೋಲ್ ಬಂಕ್ ಒಳಗೆ ನುಗ್ಗಿ ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರಾಗಿರುವ ಘಟನೆ ಗೊರಗುಂಟೆ ಪಾಳ್ಯದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.
ಹಾಸನದಿಂದ  ಕಡೆಯಿಂದ ಬೆಳಿಗ್ಗೆ ೧೧.೩೦ರ ವೇಳೆ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಾರ್ಗ ಮಧ್ಯೆ ಗೊರಗುಂಟೆ ಪಾಳ್ಯದ ಸಿಗ್ನಲ್ ದಾಟಿದ ನಂತರ ಬ್ರೇಕ್ ವೈಫಲ್ಯಗೊಂಡುಸ್ಟೇರಿಂಗ್ ಲಾಕ್ ಆಗಿ ಸ್ಪರ್ಶ್ ಆಸ್ಪತ್ರೆಯ ಬಳಿ ಎಚ್‌ಪಿ ಪೆಟ್ರೋಲ್ ಬಂಕ್‌ಗೆ ಏಕಾಎಕಿ ನುಗ್ಗಿದೆ.
ಬಸ್ಸಿನಲ್ಲಿ ಒಟ್ಟು ೧೧ ಮಂದಿ ಪ್ರಯಾಣಿಕರಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಆದರೆ ಪೆಟ್ರೋಲ್ ಹಾಕುವ ಕ್ಯಾಬಿನ್ ಪೈಪ್ ಲೈನ್, ಕಾಂಪೌಂಡ್ ಮತ್ತು ಎರಡು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.
sಸುದ್ದಿ ತಿಳಿದ ತಕ್ಷಣ ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾg.ಈ ನಡುವೆ  ಪೊಲೀಸ್ ಠಾಣೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕ ದೂರು ದಾಖಲಿಸಿ ಅಪಘಾತದಿಂದ ಸುಮಾರು ೧೫ ಲಕ್ಷ ಕ್ಕಿಂತ ಹೆಚ್ಚಾಗಿ ನಷ್ಟ ವಾಗಿದ್ದು ಅದನ್ನು  ಕೆಎಸ್‌ಆರ್‌ಟಿಸಿ ಕೊಡಬೇಕೆಂದು ತಿಳಿಸಿದ್ದಾರೆ.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا