Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬಂಕಾ(ಬಿಹಾರ): 20 ಜೂನ್ (ಫಿಕ್ರೋಖಬರ್ ಸುದ್ದಿ) ಸರ್ಕಾರದ ನೆರವಿಲ್ಲದೆ, ಅಧಿಕಾರಿಗಳು ಮನಸು ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಲಾಗದು. ಆದರೆ, ಸ್ಥಳೀಯರೇ ಅಭಿವೃದ್ಧಿಗೆ ಅಡ್ಡಿಪಡಿಸಿದರೆ ಕೇಳಬೇಕೆ? ಸ್ಥಳೀಯರ ಸಹಕಾರದ ಕೊರತೆಯಿಂದಾಗಿ ಸರ್ಕಾರವೇ ನೆರವೇರಿಸಲು ಸಾಧ್ಯವಾಗದಿದ್ದ ರಸ್ತೆ ನಿರ್ಮಾಣ ಕಾರ್ಯವನ್ನು ಇಲ್ಲಿನ ನಿಮಾ ಎಂಬ ಕುಗ್ರಾಮದ ಮಹಿಳೆಯರು ಮಾಡಿ ತೋರಿಸಿದ್ದಾರೆ.
ರಸ್ತೆ ನಿರ್ಮಾಣ ಕಾರ್ಯಕ್ಕೆ ಸ್ಥಳೀಯ ಭೂ ಮಾಲೀಕರು ಭೂಮಿ ನೀಡದ ಕಾರಣ ಇಲ್ಲಿನ ಅಧಿಕಾರಿಗಳು ರಸ್ತೆ ನಿರ್ಮಾಣ ಕಾರ್ಯವನ್ನು 4ವರ್ಷ ಹಿಂದೆಯೇ ನಿಲ್ಲಿಸಿದ್ದರು. ಆದರೆ, ಅವರ ಮನವೊಲಿಸಿರುವ ಹಳ್ಳಿಯ 130 ಮಹಿಳೆಯರು ಕೇವಲ 3 ದಿನಗಳಲ್ಲಿ 2 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸಿದ್ದಾರೆ. ಆ ಮೂಲಕ ದೇಶದ ಗಮನವನ್ನೂ ಸೆಳೆದಿದ್ದಾರೆ. ಈ ಬಗ್ಗೆ ದಿ ಟೆಲಿಗ್ರಾಫ್ನಲ್ಲಿ ವರದಿ ಪ್ರಕಟವಾಗಿದೆ.
2 ಸಾವಿರಕ್ಕೂ ಹೆಚ್ಚು ಜನರಿರುವ ನಿಮಾ ಗ್ರಾಮದಲ್ಲಿ ದಶಕಕ್ಕೂ ಹಿಂದಿನಿಂದ ರಸ್ತೆ ಸಮಸ್ಯೆ ಇದೆ. ಇದರಿಂದಾಗಿ ಶಿಕ್ಷಣದಿಂದ ವಂಚಿತರಾದವರು, ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಪ್ರಾಣ ಬಿಟ್ಟವರ ಸಂಖ್ಯೆಯೂ ದೊಡ್ಡದಿದೆ. ಹೀಗಿದ್ದರೂ ಸ್ಥಳೀಯರ ಮನವೊಲಿಸಿ ರಸ್ತೆ ನಿರ್ಮಿಸಲು ಅಧಿಕಾರಿಗಳಿಗೆ ಸಾಧ್ಯವಾಗಿರಲಿಲ್ಲ.
‘ಇಲ್ಲಿಂದ 2.5ಕಿ.ಮೀ ದೂರದ ವರೆಗೆ ಯಾವುದೇ ಆರೋಗ್ಯ ಕೇಂದ್ರಗಳಿಲ್ಲ. ಸರಿಯಾದ ರಸ್ತೆಯೂ ಇಲ್ಲದ ಕಾರಣ ಹಲವರು ಮೃತಪಟ್ಟಿದ್ದಾರೆ. ಆಸ್ಪತ್ರೆ ತಲುಪಲಾಗದೆ ಸಾವಿಗೀಡಾದವರಲ್ಲಿ ಹೆಚ್ಚಿನವರು ಗರ್ಭಿಣಿಯರು’ ಎಂದು ರೇಖಾ ದೇವಿ ಎನ್ನುವವರು ಬೇಸರ ವ್ಯಕ್ತಪಡಿಸಿದರು.
ರಸ್ತೆ ನಿರ್ಮಾಣದಲ್ಲಿ ಪಾಲ್ಗೊಂಡಿದ್ದ ಝಲೋ ದೇವಿ ಎಂಬ ಮಹಿಳೆ, ‘ಮೂರು–ನಾಲ್ಕು ವರ್ಷಗಳ ಹಿಂದೆ ಇಲ್ಲಿ ರಸ್ತೆ ನಿರ್ಮಿಸುವ ಸಲುವಾಗಿ ಸ್ಥಳೀಯ ಆಡಳಿತವು ಭೂಮಿ ವಶಪಡಿಸಿಕೊಂಡಿತ್ತು. ಆದರೆ ಭೂ ಮಾಲೀಕರು ಪ್ರತಿಭಟನೆ ನಡೆಸಿದ್ದ ಕಾರಣ ಕೆಲಸ ಅಲ್ಲಿಗೇ ನಿಂತುಹೋಗಿತ್ತು’ ಎಂದು ಹೇಳಿದರು.
ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿತ್ತು. ಈ ವೇಳೆ ಹಳ್ಳಿಯ ಮಹಿಳೆಯರು ಭೂ ಮಾಲೀಕರ ಬಳಿ ಹೋಗಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವಂತೆ ಮನವಿ ಮಾಡಿದ್ದರು. ಆರಂಭದಲ್ಲಿ ಒಪ್ಪದೇ ಇದ್ದ ಭೂ ಮಾಲೀಕರು, ಕೊನೆಗೆ ಸಮ್ಮತಿಸಿದ್ದರು.
‘ಇದೀಗ ನಿರ್ಮಾಣ ಮಾಡಲಾಗಿರುವ ರಸ್ತೆಯ ಶೇ. 70 ಭೂಮಿ ಸ್ಥಳೀಯ ಭೂ ಮಾಲೀಕರಿಗೆ ಸೇರಿದ್ದಾಗಿದೆ’ ಎಂದೂ ಹೇಳಿದರು.
‘ನಾವು ರಸ್ತೆ ನಿರ್ಮಾಣ ಕಾರ್ಯ ಆರಂಭಿಸಿದಾಗ ಜೊರಾರ್ಪುರ್ ಹಾಗೂ ದುರ್ಗಾಪುರ್ ಹಳ್ಳಿಗಳ ಕೆಲವು ಮಹಿಳೆಯರೂ ಸೇರಿಕೊಂಡರು. ಮುಂಜಾನೆಯೇ ಕೆಲಸ ಆರಂಭಿಸಿ ಸೂರ್ಯ ಮುಳುಗುವ ವರೆಗೂ ಮಾಡುತ್ತಿದ್ದೆವು. ಗಂಡಸರು ನೆಲ ಹಸನು ಮಾಡುತ್ತಿದ್ದರು. ನಾವು ಪಕ್ಕದ ನದಿ ತೀರದಿಂದ ಕಲ್ಲು, ಮಣ್ಣನ್ನು ತಂದು ಹಾಕುತ್ತಿದ್ದೆವು. ಇದೀಗ ಲಘು ವಾಹನಗಳು ಓಡಾಡುವಂತ ರಸ್ತೆ ನಿರ್ಮಾಣವಾಗಿದೆ’ ಎಂದು ಅನುಭವ ಹಂಚಿಕೊಂಡರು ಉಷಾದೇವಿ.
ಸದ್ಯ ನಿರ್ಮಿಸಲಾಗಿರುವ ರಸ್ತೆ ಪ್ರಸಿದ್ದ ಭೋಲೆ ಬಾಬಾ ಆಶ್ರಮದ ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ.
ಮಹಿಳೆಯರ ಕಾರ್ಯವನ್ನು ಶ್ಲಾಘಿಸಿರುವ ಬಂಕಾ ಜಿಲ್ಲಾಧಿಕಾರಿ ಕುಂದನ್ ಕುಮಾರ್, ‘ಖಾಸಗಿ ಭೂಮಿ ಇಲ್ಲದೆ ರಸ್ತೆ ನಿರ್ಮಿಸಲಾಗದು. ಭೂ ಮಾಲೀಕರಿಂದ ಭೂಮಿ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಆದರೆ, ಮಹಿಳೆಯರು ರಸ್ತೆ ನಿರ್ಮಾಣ ಕಾರ್ಯ ಆರಂಭಿಸಿದ ಬಳಿಕ ಅದೇ ಮಾಲೀಕರು ಭೂಮಿ ಬಿಟ್ಟುಕೊಟ್ಟಿದ್ದಾರೆ. ಈ ರಸ್ತೆಯನ್ನು ಪರಿಪೂರ್ಣ ರಸ್ತೆಯನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |