Urdu   /   English   /   Nawayathi

ಹಾಡಹಗಲೇ ರೌಡಿಶೀಟರ್ ವಾಟರ್ ಮಂಜನ ಬರ್ಬರ ಹತ್ಯೆ

share with us

ಬೆಂಗಳೂರು: 21 ಜೂನ್ (ಫಿಕ್ರೋಖಬರ್ ಸುದ್ದಿ) ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ರೌಡಿಶೀಟರ್ ವಾಟರ್ ಮಂಜನನ್ನು ಬೈಕ್‍ಗಳಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕೆ.ಆರ್.ಪುರಂನ ಓಲ್ಡ್ ಮದ್ರಾಸ್ ರಸ್ತೆಯ ಹೆವೆನ್ ಹೊಟೇಲ್ ಬಳಿ ರೌಡಿಶೀಟರ್ ವಾಟರ್ ಮಂಜ ಹೋಗುತ್ತಿದ್ದನು.

ಈ ವೇಳೆ ಬೈಕ್‍ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ವಾಟರ್ ಮಂಜನನ್ನು ಸುತ್ತುವರಿದು ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಸಾರ್ವಜನಿಕರು ಒಂದು ಕ್ಷಣ ಏನಾಗುತ್ತಿದೆ ಎಂದು ನೋಡ ನೋಡುತ್ತಿದ್ದಂತೆ ದುಷ್ಕರ್ಮಿಗಳು ಈತನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಾಟರ್ ಮಂಜ ಕೆ.ಆರ್.ಪುರಂ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಹಲವಾರು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದೆ. ಸುದ್ದಿ ತಿಳಿದ ಕೆ.ಆರ್.ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

ಸಿಸಿಟಿವಿ ಪರಿಶೀಲನೆ:
ಘಟನಾ ಸ್ಥಳದಲ್ಲಿನ ಹಾಗೂ ಸುತ್ತಮುತ್ತಲಿನ ಸಿಸಿ ಟಿವಿಗಳ ಫುಟೇಜ್‍ಗಳನ್ನು ಪೊಲೀಸರು ಪಡೆದುಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا