Urdu   /   English   /   Nawayathi

ಸಿಐಡಿ ದಾಳಿ: ಆರೋಪಿಗಳ ಮನೆಯಲ್ಲಿ ಶೋಧ

share with us

ವಿಜಯಪುರ: 21 ಜೂನ್ (ಫಿಕ್ರೋಖಬರ್ ಸುದ್ದಿ) ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ, ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡ, ಬಂಧಿತ ಪಿಎಸ್‌ಐ ಗೋಪಾಲ ಹಳ್ಳೂರ, ಕಾನ್‌ಸ್ಟೆಬಲ್‌ ಸಿದ್ಧಾರೂಡ ರೂಗಿ ಅವರ ಮನೆ ಮೇಲೆ ಸಿಐಡಿ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.

ನಾಪತ್ತೆಯಾಗಿರುವ ಆರೋಪಿ ಮಹಾದೇವ ಭೈರಗೊಂಡನ ಕೆರೂರಿನ ನಿವಾಸ ಮತ್ತು ಕಚೇರಿ ಮೇಲೆ ಸಿಐಡಿ ಎಸ್ಪಿ ಎಚ್‌.ಡಿ.ಆನಂದಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಶೋಧ ನಡೆಸಿತು. ಐದು ತಾಸಿಗೂ ಹೆಚ್ಚು ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.

ಚಡಚಣ ಪೊಲೀಸ್ ಠಾಣೆ ಆವರಣದಲ್ಲಿರುವ ಗೋಪಾಲ ಹಳ್ಳೂರ, ಸಿದ್ಧಾರೂಢ ರೂಗಿ ಅವರ ಮನೆಯನ್ನೂ ಶೋಧಿಸಲಾಗಿದ್ದು, ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾಗಿ ತಿಳಿದುಬಂದಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا