Urdu   /   English   /   Nawayathi

9ನೇ ತರಗತಿ ವಿದ್ಯಾರ್ಥಿ ಕೊಲೆ, ಶೌಚಾಲಯದಲ್ಲಿ ಮೃತದೇಹ ಪತ್ತೆ

share with us

ವಡೋದರ: 23 ಜೂನ್ (ಫಿಕ್ರೋಖಬರ್ ಸುದ್ದಿ) ಎರಡು ದಿನಗಳ ಹಿಂದಷ್ಟೇ ಶಾಲೆಗೆ ಸೇರಿದ್ದ 9ನೇ ತರಗತಿ ವಿದ್ಯಾರ್ಥಿಯನ್ನು ಹಿರಿಯ ವಿದ್ಯಾರ್ಥಿಗಳು ಕೊಲೆ ಮಾಡಿರುವ ಆತಂಕಕಾರಿ ಘಟನೆ ಗುಜರಾತ್‍ನ ಭರಣ್‍ಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಿನ್ನೆ ನಡೆದಿದೆ. ದೇವ್ ಭಗವಾನ್‍ದಾಸ್ ತಡ್ವಿ (14) ಕೊಲೆಯಾದ ವಿದ್ಯಾರ್ಥಿ. ಈತನ ಶವ ನಿನ್ನೆ ಮಧ್ಯಾಹ್ನ 12ರ ಸಮಾರಿನಲ್ಲಿ ಶಾಲೆಯ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಕಂಡುಬಂದಿತ್ತು.

73 ವರ್ಷಗಳಷ್ಟು ಹಳೆಯದಾದ ಶ್ರೀ ಭಾರತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈತನನ್ನು 10ನೇ ತರಗತಿ ವಿದ್ಯಾರ್ಥಿಗಳು ಥಳಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಕತ್ತು ಸೀಳಿ ಕೊಂದಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ಹರ್ಯಾಣದ ರೆಯಾನ್ ಇಂಟರ್‍ನ್ಯಾಷನಲ್ ಸ್ಕೂಲ್‍ನಲ್ಲಿ ಪ್ರದ್ಯುಮ್ನ ಎಂಬ ಬಾಲಕನನ್ನು ಹಿರಿಯ ವಿದ್ಯಾರ್ಥಿಯೊಬ್ಬ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿ ಭೀಕರವಾಗಿ ಕೊಂದಿದ್ದ ಘಟನೆಯನ್ನು ಈ ಕೃತ್ಯ ನೆನಪಿಸುತ್ತದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا