Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಚೆನ್ನೈ: 25 ಜೂನ್ (ಫಿಕ್ರೋಖಬರ್ ಸುದ್ದಿ) ಸರ್ಕಾರದ ವಿವಿಧ ಇಲಾಖೆಗಳ ಪರಾಮರ್ಶೆಗಾಗಿ ಜಿಲ್ಲೆಗಳಿಗೆ ಕ್ಷೇತ್ರ ಭೇಟಿ ನೀಡುತ್ತಿರುವ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಮತ್ತು ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಜಟಾಪಟಿ ಈಗ ಹೊಸ ತಿರುವು ಪಡೆದುಕೊಂಡಿದೆ.
ಸಂವಿಧಾನದ ಅಡಿ ನನಗೆ ಪ್ರದತ್ತವಾಗಿರುವ ಅಧಿಕಾರಗಳನ್ನು ಚಲಾಯಿಸಲು ಯಾರಾದರೂ ಅಡ್ಡಿ ಮಾಡಿದರೆ ಅವರು ಜೈಲು ಮತ್ತು ಜುಲ್ಮಾನೆಗೆ ಒಳಗಾಗಬೇಕಾಗುತ್ತದೆ ಎಂದು ರಾಜ್ಯಪಾಲರು ಎಚ್ಚರಿಕೆ ನೀಡಿದ್ದಾರೆ.
ಈ ಬೆದರಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ವಿಧಾನಸಭೈ ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್, ರಾಜ್ಯಪಾಲರು ಕ್ಷುಲ್ಲಕ ರಾಜಕಾರಣದಲ್ಲಿ ತೊಡಗಿದ್ದಾರೆ. ವಿರೋಧ ಪಕ್ಷಗಳ ಮುಖಂಡರನ್ನು ಬಂಧಿಸಿ ಜೈಲು ಶಿಕ್ಷೆ ವಿಧಿಸುವುದಾಗಿ ರಾಜ್ಯಪಾಲರು ನೀಡಿರುವ ಹೇಳಿಕೆ ಖಂಡನಾರ್ಹ ಎಂದು ಟೀಕಿಸಿದ್ದಾರೆ. ರಾಜ್ಯಪಾಲರು ವಿನಾಕಾರಣ ಎಲ್ಲ ವಿಷಯಗಳಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅದು ಅವರ ಹುದ್ದೆಗೆ ಶೋಭೈ ತರುವಂಥದ್ದಲ್ಲ ಎಂದು ಡಿಎಂಕೆ ಮತ್ತು ಪ್ರತಿಪಕ್ಷಗಳು ಟೀಕಿಸಿದ್ದವು. ಇದಕ್ಕೆ ನಿನ್ನೆ ಹೇಳಿಕೆ ನೀಡಿರುವ ರಾಜಭವನ, ರಾಜ್ಯಪಾಲರ ಕಾರ್ಯಾಲಯಕ್ಕೆ ಐಪಿಸಿ ಸೆಕ್ಷನ್ 124ರ ಅಡಿ ರಕ್ಷಣೆ ಇದೆ. ಕಾನೂನು ಸಮ್ಮತವಾಗಿ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು ಚಲಾಯಿಸುವುದಕ್ಕೆ ರಾಜ್ಯಪಾಲರಿಗೆ ಕ್ರಿಮಿನಲ್ ಬಲವಂತದಿಂದಾಗಲಿ ಅಥವಾ ಇತರ ಕೃತ್ಯಗಳಿಂದಾಗಲಿ ಅಡ್ಡಿ ಉಂಟು ಮಾಡಿದರೆ ಅಂಥವರಿಗೆ ಏಳು ವರ್ಷದವರೆಗೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಸರ್ಕಾರದ ಇಲಾಖೆಗಳ ಕಾರ್ಯವೈಖರಿಯನ್ನು ಪರಾಮರ್ಶಿಸಲು ಆಯಾ ಇಲಾಖೆಗಳ ಸಚಿವರಿದ್ದಾರೆ. ರಾಜ್ಯಪಾಲರು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ನಾವು ವಿರೋಧಿಸುತ್ತೇವೆ. ಗೌರ್ನರ್ ಅವರ ಈ ಕ್ರಮವು ಪರ್ಯಾಯ ಆಡಳಿತದ ಯತ್ನವಾಗಿದೆ. ಇದರ ವಿರುದ್ಧ ಸರ್ಕಾರದ ಹಿತಾಸಕ್ತಿಗಾಗಿ ನಾವು ಕಪ್ಪು ಬಾವುಟ ಪ್ರದರ್ಶನ ಪ್ರತಿಭಟನೆ ಮುಂದುವರಿಸುವುದಾಗಿ ಸ್ಟಾಲಿನ್ ಹೇಳಿದ್ಧಾರೆ. ಇದರೊಂದಿಗೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಮತ್ತು ವಿರೋಧಪಕ್ಷಗಳ ಮುಖಂಡರ ನಡುವೆ ಹಗ್ಗ-ಜಗ್ಗಾಟ ಮುಂದುವರಿದಂತಾಗಿದೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |