Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೈದರಾಬಾದ್: 25 ಜೂನ್ (ಫಿಕ್ರೋಖಬರ್ ಸುದ್ದಿ) 'ಭಾರತದಲ್ಲಿ ಜಾತ್ಯತೀತತೆಯನ್ನು ಜೀವಂತವಿರಿಸಲು ಮುಸ್ಲಿಮರು ತಮ್ಮದೇ ಸಮುದಾಯದ ಅಭ್ಯರ್ಥಿಗಳಗೆ ಓಟ್ ಹಾಕಬೇಕು' ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷಗಳು ಹಿಂದೂ ಮತಗಳ ಹಿಂದೆ ಬಿದಿದ್ದಾರೆ; ಮುಸ್ಲಿಮರ ಬಗ್ಗೆ ಅವಜ್ಞೆ ತೋರುತ್ತಿದ್ದಾರೆ ಎಂದು ಓವೈಸಿ ಆಪಾದಿಸಿದರು.
ಹೈದರಾಬಾದ್ ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಅವರು ವಿವಾದಾತ್ಮಕ ಭಾಷಣ ಮಾಡುತ್ತಾ, "ಕಾಸಿಂ ಸಾವು ನಮ್ಮನ್ನುಆಲೋಚಿಸುವಂತೆ ಮಾಡಿದೆ. ಆದರೆ ಅದಕ್ಕಾಗಿ ನೀವು ಮೊಸಳೆ ಕಣ್ಣೀರು ಸುರಿಸಬೇಕೆಂದು ನಾನು ಹೇಳುತ್ತಿಲ್ಲ. ನಿಮ್ಮ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಬಯಸುತ್ತೇನೆ. ಜಾತ್ಯತೀತತೆಯ ಬಗ್ಗೆ ಮಾತನಾಡುವ ಈ ಜನರು ಬಹಳ ದೊಡ್ಡ ಡಕಾಯಿತರಾಗಿದ್ದಾರೆ; ದೊಡ್ಡ ಸಮಯಸಾಧಕರಾಗಿದ್ದಾರೆ.ಅವರು ಮುಸ್ಲಿಮರನ್ನು ಕಳೆದ 70 ವರ್ಷಗಳಿಂದ ಉಪಯೋಗಿಸಿಕೊಂಡು ಬಂದಿದ್ದಾರೆ; ಬೆದರಿಕೆ ಹಾಕಿದ್ದಾರೆ; ಸುಮ್ಮಗಿರುವಂತೆ ಬಲವಂತ ಮಾಡಿದ್ದಾರೆ' ಎಂದು ಓವೈಸಿ ಹೇಳಿದರು.
"ಈಗ ನೀವು ನಿಮ್ಮ ಹಕ್ಕುಗಳಿಗಾಗಿ ಹೋರಾಡಬೇಕಾಗಿದೆ; ಈ ದೇಶದಲ್ಲಿ ಜಾತ್ಯತೀತತೆ ಜೀವಂತ ಇರಬೇಕು ಎಂದು ನೀವು ಬಯಸುವುದಾದರೆ ನಿಮಗಾಗಿ ನೀವು ಹೋರಾಡಿ ಎಂದು ನಾನು ಹೇಳುತ್ತೇನೆ. ನೀವೊಂದು ರಾಜಕೀಯ ಶಕ್ತಿಯಾಗಬೇಕು ಎಂದು ಹೇಳುತ್ತೇನೆ. ನಿಮ್ಮ ಸಮುದಾಯದ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಿರೆಂದು ಕೇಳಿಕೊಳ್ಳುತ್ತೇನೆ ' ಎಂದು ಓವೈಸಿ ಕರೆ ನೀಡಿದರು.
ಚಚ್ಚಿ ಸಾಯಿಸಲಾದ ಹಾಪುರ್ ಪ್ರಕರಣವನ್ನು ಉಲ್ಲೇಖೀಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹಿರಂಗ ವಾಕ್ ದಾಳಿ ನಡೆಸಿದ ಓವೈಸಿ, "ಅವರು ಕೆಟ್ಟ ಪದಗಳನ್ನು ಬಳಸಿದ್ದಾರೆ; ಎಷ್ಟು ಬಂಧನಗಳನ್ನು ಮಾಡಿದ್ದಾರೆ; ಕೇವಲ ಎರಡು; ಇದನ್ನು ನಿಮ್ಮ ಆಳ್ವಿಕೆಯಡಿಯೇ ಮಾಡಲಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ನಿಮ್ಮ ಘೋಷಣೆಯ ಅರ್ಥ ಇದೇ ಏನು?' ಎಂದು ಓವೈಸಿ ಪ್ರಶ್ನಿಸಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |