Urdu   /   English   /   Nawayathi

ಒಂದೇ ದಿನದಲ್ಲಿ ವ್ಯವಸ್ಥೆಯನ್ನು ಬದಲಾಯಿಸಲಾಗಲ್ಲ, ಸ್ವಲ್ಪ ಟೈಮ್ ಕೊಡಿ : ಸಿಎಂ

share with us

ಬೆಂಗಳೂರು: 09 ಜುಲೈ (ಫಿಕ್ರೋಖಬರ್ ಸುದ್ದಿ) ಒಂದೇ ದಿನದಲ್ಲಿ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗಷ್ಟೆ ಮುಖ್ಯಮಂತ್ರಿಯಾಗಿದ್ದೇನೆ. ಕಾಲಾವಕಾಶ ಕೊಡಿ ಹಂತ ಹಂತವಾಗಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಯಲ್ಲಿ ಉತ್ತರ ನೀಡಿದ ಕುಮಾರಸ್ವಾಮಿ ಅವರು, ರಾಜ್ಯದ ಅಭಿವೃದ್ಧಿ ಬಗ್ಗೆ ಮರಳು ಮಾಫಿಯಾ, ಭದ್ರ, ಕೃಷ್ಣ ಮೇಲ್ದಂಡೆ ನೀರಾವರಿ ಯೋಜನೆಗಳು, ಎಸಿಬಿ, ಗುತ್ತಿಗೆ ನೌಕರರನ್ನು ಖಾಯಂ ಮಾಡುವ ಬಗ್ಗೆ, ನೇಕಾರರ ಹಾಗೂ ಸ್ತ್ರೀ ಶಕ್ತಿ ಸಂಘ ಸಾಲಮನ್ನಾ, ಅಸಕ್ತ ವರ್ಗಗಳ ಮಾಸಾಶನ ಹೆಚ್ಚಳ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಕಳೆದ ಒಂದು ವಾರದಿಂದ ನಡೆದ ಚರ್ಚೆಯಲ್ಲಿ ಶಾಸಕರು ಗಮನ ಸೆಳೆದಿದ್ದಾರೆ.

ನಾನು ಎಲ್ಲವನ್ನು ಬರೆದಿಟ್ಟುಕೊಂಡಿದ್ದೇನೆ. ಹಂತ ಹಂತವಾಗಿ ಎಲ್ಲದಕ್ಕೂ ಸ್ಪಂದಿಸುತ್ತೇನೆ. ಜಾದು ಮಾಡಿ ಏಕಾಏಕಿ ಎಲ್ಲವೂ ಬದಲಿಸಲು ಸಾಧ್ಯವಿಲ್ಲ ಸಮಯ ಕೊಡಿ ಎಂದು ಕುಮಾರಸ್ವಾಮಿ ಮನವಿ ಮಾಡಿದರು. ನಂತರ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು, ರಾಜ್ಯಪಾಲರ ಭಾಷಣಕ್ಕೆ ಕೃತ್ಯಜ್ಞತೆ ಸಲ್ಲಿಸುವ ನಿರ್ಣಯವನ್ನು ಮತಕ್ಕೆ ಹಾಕಿದರು. ಧ್ವನಿ ಮತದ ಮೂಲಕ ಭಾಷಣಕ್ಕೆ ಸರ್ವಾನುಮತದ ಕೃತಜ್ಞತೆ ಹೇಳಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا