Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಇಸ್ಲಾಮಾಬಾದ್: 18 ಜುಲೈ (ಫಿಕ್ರೋಖಬರ್ ಸುದ್ದಿ) ಭಾರತದ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರ ಪ್ರಕರಣಕ್ಕೆ ಸಂಬಂಧಿಸಿದ ಪಾಕಿಸ್ತಾನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ತನ್ನ ಎರಡನೇ ಪ್ರತಿಹೇಳಿಕೆಯನ್ನು ದಾಖಲಿಸಿದೆ. ಕಳೆದ ವರ್ಷ ಜಾದವ್ ಅವರನ್ನು ನೋಡಲು ಅವರ ತಾಯಿ ಹಾಗೂ ಪತ್ನಿ ಹೋಗಿದ್ದಾಗ ಪಾಕಿಸ್ತಾನ ಅನುಚಿತವಾಗಿ ವರ್ತಿಸಿದೆ ಎಂಬ ಭಾರತದ ಆರೋಪವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಇತ್ತೀಚಿನ ಸುತ್ತಿನ ವಿಚಾರಣೆ ಬಳಿಕ ಈ ವಿಷಯವನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಮುಂದಿನ ವರ್ಷದಲ್ಲಿ ವಿಚಾರಣೆ ನಿಗದಿಗೊಳಿಸುವ ಸಾಧ್ಯತೆ ಇದೆ. ಏ. 17 ರಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಎದುರು ತನ್ನ ಅಭಿಪ್ರಾಯ ಮಂಡಿಸಿತ್ತು. ಜಾದವ್ ಸಾಮಾನ್ಯ ವ್ಯಕ್ತಿಯಲ್ಲ. ವಿಯನ್ನಾ ಒಪ್ಪಂದದ ವ್ಯಾಪ್ತಿಯನ್ನು ಮೀರಿಲ್ಲ ಎಂದು ಹೇಳಿಕೆ ನೀಡಿತ್ತು. ಕಳೆದ ವರ್ಷದ ಮೇ 8 ರ ಬಳಿಕ ಇದೇ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ ದಾಖಲಿಸಿದ ಭಾರತ, ವಿಯನ್ನಾ ಒಪ್ಪಂದಕ್ಕೆ ಸಂಬಂಧಿಸಿದ 1963ಯ ವಿನಾಯಿತಿಯನ್ನು ಉಲ್ಲಂಘಿಸಿಲ್ಲ ಎಂದು ಭಾರತ ಹೇಳಿಕೆ ನೀಡಿತ್ತು.
ಮೇ. 18 ರಂದು ಅಂತಾರಾಷ್ಟ್ರೀಯ ನ್ಯಾಯಾಲಯ ಪಾಕಿಸ್ತಾನ ಯಾವುದೇ ಕಾರಣಕ್ಕೂ ಜಾದವ್ ಗೆ ಮರಣದಂಡನೆಯಂತಹ ಶಿಕ್ಷೆಯನ್ನು ಪ್ರಕಟಿಸಬಾರದೆಂದು ತನ್ನ ಮಧ್ಯಂತರ ತೀರ್ಪಿನಲ್ಲಿ ಪ್ರಕಟಿಸಿತ್ತು.
ಈ ಆದೇಶದಂತೆ ಭಾರತ ಕಳೆದ ವರ್ಷ ಸೆಪ್ಟೆಂಬರ್ 13 ರಂದು ಜಾದವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ ಹೇಳಿಕೆ ನೀಡಿತ್ತು. ನಂತರ ಡಿಸೆಂಬರ್ ನಲ್ಲಿ ಪಾಕಿಸ್ತಾನ ಪ್ರತಿ ಹೇಳಿಕೆ ದಾಖಲಿಸಿತ್ತು.
ಭಾರತದ ಗುಪ್ತಚರ ಸಂಸ್ಥೆ ರಾಗೆ ಬೇಹುಗಾರಿಕೆ ಹಾಗೂ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವಿಕೆ ಆರೋಪದ ಮೇರೆಗೆ ಬಲೂಚಿಸ್ತಾನದಲ್ಲಿ ಜಾದವ್ ಅವರನ್ನು ಪಾಕಿಸ್ತಾನ ಬಂಧಿಸಿತ್ತು. ಮಾಜಿ ನೌಕಾಯಾನದ ಅಧಿಕಾರಿಯನ್ನು ಇರಾನ್ ನಿಂದ ಪಾಕಿಸ್ತಾನ ಆರೋಪಿಸಿದೆ ಎಂದು ಭಾರತ ಆರೋಪಿಸುತ್ತಾ ಬಂದಿದೆ.
ಕಳೆದ ವರ್ಷ ಏಪ್ರಿಲ್ 10 ರಂದು ಜಾದವ್ ಅವರಿಗೆ ಪಾಕಿಸ್ತಾನ ನ್ಯಾಯಾಲಯದಿಂದ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಒಂದು ತಿಂಗಳ ನಂತರ ಭಾರತದ ಮನವಿಗೆ ಮೇರೆಗೆ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಪಾಕಿಸ್ತಾನದ ಮರಣದಂಡನೆ ಶಿಕ್ಷೆಗೆ ತಡೆ ನೀಡಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |