Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 19 ಜುಲೈ (ಫಿಕ್ರೋಖಬರ್ ಸುದ್ದಿ) ಸದನದಲ್ಲಿಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ವಚನ ನೀಡಿದಂತೆ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು 15 ದಿನಗಳ ಗಡುವು ನೀಡುತ್ತೇವೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸದಿದ್ದರೆ, ಜಿಲ್ಲಾವ್ಯಾಪ್ಕಿ ಹೋರಾಟ ನಡೆಸುತ್ತೇವೆ. ನಮ್ಮ ಹೋರಾಟದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಖರ್ಚಿಗೆ ಕುತ್ತು ಬರಬಹುದು' ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ವಕ್ಫ್ ಆಸ್ತಿ ಕಬಳಿಕೆಯಾಗಿದೆ. ಇದರಲ್ಲಿ ಅನೇಕ ಪ್ರಮುಖ ರಾಜಕಾರಣಿಗಳು ಭಾಗಿಯಾಗಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಆಗ್ರಹಿಸಿದ್ದರು. ಆದರೆ, ಈಗ ಉಲ್ಟಾ ಹೊಡೆಯುತ್ತಿದ್ದಾರೆಂದು ಕೋಟಾ ಶ್ರೀನಿವಾಸ್ ಆರೋಪಿಸಿದ್ದಾರೆ.
ವಕ್ಫ್ ಮಂಡಳಿಯ ಭೂ ಕಬಳಿಕೆ ಪ್ರಕರಣ ಸಂಬಂಧ 7 ಸಾವಿರ ಪುಟಗಳ ವರದಿ ಸಲ್ಲಿಸಲಾಗಿದೆ. ಬಿಜೆಪಿ ಸರಕಾರ ಈ ವರದಿಯನ್ನು ಸದನದಲ್ಲಿ ಇಟ್ಟಾಗ ಕಾನೂನು ಅಭಿಪ್ರಾಯ ಪಡೆಯಲು ತೀರ್ಮಾನವಾಗಿತ್ತು. ನಂತರ ಸಂಪುಟ ಸಭೆಯಲ್ಲಿ ಕಾನೂನು ವಿಧಾನಗಳ ರೂಪುರೇಷೆ ಸಿದ್ಧವಾಗಿತ್ತು. ಕಬಳಿಕೆಯಾದ ಆಸ್ತಿಯನ್ನು ಮತ್ತೆ ವಾಪಸ್ ಪಡೆಯಲು ಕಾನೂನು ರೂಪಿಸಲು ಕ್ರಮ ಕೈಗೊಳ್ಳಲಾಯಿತು. ಪ್ರಕರಣ ಸಂಬಂಧ ಹೈಕೋರ್ಟ್ಗೆ ಹೋದ ಬಳಿಕ ನಮ್ಮದೇ ನಿಲುವನ್ನು ನ್ಯಾಯಾಲಯ ಕೂಡ ವ್ಯಕ್ತಪಡಿಸಿತ್ತು ಎಂದು ಅವರು ವಿವರಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿ, ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುತ್ತೇನೆ ಎಂದು ಸದನದಲ್ಲಿ ಭರವಸೆ ನೀಡಿದ್ದರು. ಅವರು ಹೇಳಿಕೆಯ ಸಿಡಿ ನಮ್ಮ ಬಳಿ ಇದೆ. ಆದರೆ, ಈ ಸಿಡಿ ಬಿಡುಗಡೆ ಮಾಡಲು ಅನುಮತಿ ಪಡೆಯಬೇಕು. ಅಗತ್ಯ ಬಿದ್ದರೆ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.
ವಿ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |