Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 21 ಜುಲೈ (ಫಿಕ್ರೋಖಬರ್ ಸುದ್ದಿ) ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ಪ್ರಕರಣ ಸಂಬಂಧಿಸಿದಂತೆ ಒಂಬತ್ತು ಜನ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ವಿಜಯಪುರದ ರತ್ನಾಪುರ ಗ್ರಾಮದ ಮನೋಹರ್ ಯಡವೆ ಸೇರಿ ಒಂಬತ್ತು ಜನ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ಸಲ್ಲಿಕೆಯಾಗಿದ್ದು ಹತ್ಯೆಗೆ ಸಂಚು ಆರೋಪದಡಿ ಗೌರಿ ಲಂಕೇಶ್ ಪ್ರಕರಣದ ಪ್ರಮುಖ ಆರೋಪಿ ಮದ್ದೂರು ಮೂಲದ ಕೆ.ಟಿ.ನವೀನ್ ಕುಮಾರ್, ಶಿಕಾರಿಪುರದ ಕಪ್ಪನಹಳ್ಳಿ ಗ್ರಾಮದ ಸುಜಿತ್ ಕುಮಾರ್, ಮಹಾರಾಷ್ಟ್ರದ ಅಮೋಲ್ ಕಾಳೆ, ಅಮೀತ್ ದೆಗ್ವೇಕರ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪವೂ ಇವರ ಮೇಲಿದೆ.
ಒಟ್ಟು 671 ಪುಟಗಳ ದೋಷಾರೋಪ ಪಟ್ಟಿ ಉಪ್ಪಾರಪೇಟೆ ಪೊಲೀಸರು ಸಲ್ಲಿಸಿದ್ದಾರೆ. ಪೊಲೀಸರು 100 ಕ್ಕು ಹೆಚ್ಚು ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿದ್ದು, ಎಫ್ಎಸ್ಎಲ್ ತಜ್ಞರ ವರದಿಗಳನ್ನು ಲಗತ್ತಿಸಿದ್ದಾರೆ.
ಶ್ರೀರಂಗಪಟ್ಟಣದ ಅನೀಲ್ ಕುಮಾರ್, ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿರುವ ಪ್ರಮುಖ ಸಾಕ್ಷಿಯಾಗಿದ್ದು, ಆರೋಪಿ ಕೆ.ಟಿ.ನವೀನ್ ಅಲಿಯಾಸ್ ಹೊಟ್ಟೆ ಮಂಜನ ಸ್ನೇಹಿತ ಎಂದು ತಿಳಿದು ಬಂದಿದೆ. ಹೊಟ್ಟೆ ಮಂಜ ಹಾಗೂ ಸುಜಿತ್ ನಡುನಿನ ಮೊಬೈಲ್ ಸಂಭಾಷಣೆ ಪತ್ತೆಯಾಗಿದ್ದು, ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸುವ ಕುರಿತು ಒಂದೂವರೆ ಗಂಟೆ ಚರ್ಚಿಸಿದ್ದಾರೆ ಎನ್ನುತ್ತಿವೆ ಪೊಲೀಸ್ ಮೂಲಗಳು.
ಗೌರಿ ಹತ್ಯೆ ಪ್ರಕರಣದ ತನಿಖೆ ವೇಳೆ ಫೆಬ್ರವರಿ 8 ರಂದು ಶಸ್ತ್ರಾಸ್ತ್ರ ಮಾರಾಟ ಆರೋಪದಡಿ ಹೊಟ್ಟೆಮಂಜ ಬಂಧಿತನಾಗಿದ್ದು, ತನಿಖೆ ವೇಳೆ ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದು ಬೆಳಕಿಗೆ ಬಂದಿತ್ತು.
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |