Urdu   /   English   /   Nawayathi

ಶಾಲೆಗೆ ಹೋಗಲು ಹೆಲಿಕಾಪ್ಟರ್‌ ಕಳಿಸಿ: ಆದಿತ್ಯನಾಥ್‌ಗೆ ವಿದ್ಯಾರ್ಥಿನಿ ಪತ್ರ

share with us

ಮಥುರಾ: 25 ಜುಲೈ (ಫಿಕ್ರೋಖಬರ್ ಸುದ್ದಿ) ಶಾಲೆಗೆ ತೆರಳಲು ಹೆಲಿಕಾಪ್ಟರ್‌ ಅಥವಾ ಬೋಟಿನ ವ್ಯವಸ್ಥೆ ಮಾಡಿಕೊಡುವಂತೆ 8ನೇ ತರಗತಿ ವಿದ್ಯಾರ್ಥಿನಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾಳೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿನ ಮರ್ಹಾಲ ಗ್ರಾಮದ ಭಾವನಾ, ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಹುಡುಗಿ. ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೊಳಿಸಿದೆ. ಯೋಜನೆಯ ಬಗ್ಗೆ ಸಾಕಷ್ಟು ಪ್ರಚಾರವನ್ನೂ ನೀಡುತ್ತಿದ್ದಾರೆ. ಆದರೆ ಮಥುರಾದ ಅನೇಕ ಭಾಗಗಳಲ್ಲಿ ಮಕ್ಕಳು ಶಾಲೆಗೆ ಹೋಗುವುದೇ ಕಷ್ಟವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾಳೆ. 
ಗ್ರಾಮದಲ್ಲಿ ಸರಿಯಾದ ರಸ್ತೆಯಾಗುವವರೆಗೆ, ಶಾಲೆಗೆ ಹೋಗಲು ಅಗತ್ಯ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿದ್ದು, ಸಾಧ್ಯವಾಗುದಾದರೆ, ಶಾಲೆಗೆ ತೆರಳಲು ಹೆಲಿಕಾಪ್ಟರ್‌ನ ವ್ಯವಸ್ಥೆ ಮಾಡುವಂತೆ ಹೇಳಿದ್ದಾಳೆ. 

ವಿ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا