Urdu   /   English   /   Nawayathi

ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಬಾಂಬ್‌ ಬೆದರಿಕೆ: ಅರ್ಚಕನ ಸೆರೆ

share with us

ತಿರುವನಂತಪುರಂ: 06 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ಕಾರ್ಯಕ್ರಮಕ್ಕೆ ಬಾಂಬ್‌ ಸ್ಫೋಟದ ಬೆದರಿಕೆ ಹಿನ್ನೆಲೆಯಲ್ಲಿ ದೇವಸ್ಥಾನ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ಚಿರಕ್ಕಲ್‌ ಭಗವತಿ ದೇವಾಲಯದ ಅರ್ಚಕ ಜಯರಾಂ ಬಂಧಿತ. ಮೂರು ದಿನಗಳ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌, ಮಂಗಳವಾರ ಸೈಂಟ್‌ ಥಾಮಸ್‌ ಕಾಲೇಜಿನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜು ಆವರಣದಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಭಾನುವಾರ ರಾತ್ರಿ ಸುಮಾರು ಒಂದು ಗಂಟೆಗೆ ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿದ್ದಾರೆ. 

ಮೊಬೈಲ್‌ ನಂಬರ್‌ ಟ್ರೇಸ್‌ ಮಾಡಿದ ಪೊಲೀಸರು, ಅರ್ಚಕನ್ನು ವಶಕ್ಕೆ ಪಡೆದಿದ್ದಾರೆ. ಅಮಲಿನಲ್ಲಿ ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ಅರ್ಚಕ ತಿಳಿಸಿದ್ದಾನೆ ಎನ್ನಲಾಗಿದೆ. 

ಬುಧವಾರ ಗುರುವಾಯೂರು ದೇವಾಲಯಕ್ಕೆ ರಾಮನಾಥ್‌ ಕೋವಿಂದ್‌ ಭೇಟಿ ನೀಡಲಿದ್ದು, ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 

ವಿ, ಕ ವರದಿ  

Prayer Timings

Fajr فجر
Dhuhr الظهر
Asr أسر
Maghrib مغرب
Isha عشا