Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕುಂದಾಪುರ: 08 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ನಗರದ ಎಲ್.ಐ.ಸಿ ರಸ್ತೆಯಲ್ಲಿ ಯುವಕನೋರ್ವನನ್ನು ಮಹಿಳೆಯರ ಗುಂಪೊಂದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ಕಾನೂನು ಕೈಗೆತ್ತಿಕೊಂಡ ಘಟನೆ ವರದಿಯಾಗಿದೆ. ಯುವಕ ಕೆಲ ಸಮಯದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದು, ಜನನಿಬಿಡ ರಸ್ತೆಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಮಹಿಳೆಯರು ಸಂಚರಿಸುತ್ತಿದ್ದರೂ ಆತ ಅದನ್ನು ಗಣನೆಗೆ ತೆಗೆದುಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ.
ಯುವಕನ ವರ್ತನೆಯನ್ನು ಗಮನಿಸುತ್ತಿದ್ದ ಸ್ಥಳೀಯರು ಮಹಿಳೆಯರ ನೇತೃತ್ವದಲ್ಲಿ ಈತನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಈ ವಿಷಯ ಪೊಲೀಸರ ಗಮನಕ್ಕೆ ಬಂದ ಬಳಿಕ ಅವರು ಸ್ಥಳಕ್ಕೆ ಧಾವಿಸಿ ಯುವಕನನ್ನು ಗುಂಪು ಹಲ್ಲೆಯಿಂದ ರಕ್ಷಿಸಿದ್ದಾರೆ.
ಯುವಕ ನಗರದ ಪ್ರಸಿದ್ಧ ಹೊಟೇಲ್ ಉದ್ಯಮಿಯೋರ್ವರ ಮಗನಾಗಿದ್ದು, ವಿವಾಹಿತನಾಗಿರುವ ಈತನಿಗೆ ಮಕ್ಕಳಿದ್ದಾರೆ ಎಂದು ಮನೆಮಂದಿ ತಿಳಿಸಿದ್ದಾರೆ. ಕೆಲ ಸಮಯದಿಂದ ಈತನ ಮನಸ್ಸು ಸ್ಥಿಮಿತದಲ್ಲಿರದ ಕಾರಣ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆಗೆ ತೊಡಗುತ್ತಿದ್ದ ಎನ್ನಲಾಗಿದೆ.
ಈತನ ವರ್ತನೆ ಸಾರ್ವಜನಿಕರಿಗೆ ಮುಜುಗರ ತರುವಂಥದ್ದಾಗಿದ್ದರೂ ತಾವೇ ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸುವ ಬದಲು ಆತನ ಮನೆಮಂದಿ ಅಥವಾ ಪೊಲೀಸರಿಗೆ ಮಾಹಿತಿ ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಬಹುದಿತ್ತು. ಒಬ್ಬ ವ್ಯಕ್ತಿಯನ್ನು ಹಲವರು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸುವಂಥ ವರ್ತನೆ ಕುಂದಾಪುರದ ಪ್ರಜ್ಞಾವಂತ ನಾಗರಿಕರಿಗೆ ತಕ್ಕುದಲ್ಲ ಎಂದು ವಿಚಾರವಂತರು ಗುಂಪು ಹಲ್ಲೆಯ ಬಗ್ಗೆ ತೀವೃ ಬೇಸರ ವ್ಯಕ್ತಪಡಿಸುತ್ತಿರುವುದು ಗಮನಾರ್ಹ.
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |