Urdu   /   English   /   Nawayathi

ಕೊಡಗಿಗೆ ಕೂಡಲೇ 500 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ವಾಟಾಳ್ ಆಗ್ರಹ

share with us

ಬೆಂಗಳೂರು: 21 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಪ್ರಕೃತಿ ವಿಕೋಪದಿಂದ ಹಾಳಾಗಿರುವ ಕೊಡಗನ್ನು ಪುನರ್ ನಿರ್ಮಾಣಮಾಡಲು ಕೇಂದ್ರಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆಮಾಡಬೇಕು. ಪ್ರಧಾನಿ ನರೇಂದ್ರಮೋದಿಯವರು ಕೊಡಗಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪಾಲಿಕೆ ಕಚೇರಿಯ ಎದುರು ಇಂದು ಪ್ರತಿಭಟನೆ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಪ್ರಳಯದಿಂದ ಜರ್ಝರಿತವಾಗಿರುವ ಕೊಡಗಿನ ಜನರ ನೆರವಿಗೆ ನಾವೆಲ್ಲರೂ ಧಾವಿಸಬೇಕಿದೆ ಎಂದರು.

ನವ ಕೊಡಗು ನಿರ್ಮಾಣ ಮಾಡಬೇಕಿದೆ. ಕೇಂದ್ರಹಾಗೂ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ಕೂಡಲೇ ಒಂದು ಸಾವಿರ ಶೌಚಾಲಯ ನಿರ್ಮಾಣ ಮಾಡಬೇಕು, ಮನೆಗಳನ್ನು ಕಟ್ಟಿಕೊಡಬೇಕು. ನಿರಾಶ್ರಿತ ಶಿಬಿರದಲ್ಲಿರುವವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲಿನ ಜನರ ಬದುಕು ಮೂರಾಬಟ್ಟೆಯಾಗಿದೆ. ಜನಪ್ರತಿನಿಧಿಗಳು ಪ್ರತಿಷ್ಠೆಯನ್ನು ಬದಿಗಿಟ್ಟು ಜನರ ನೋವಿಗೆ ಸ್ಪಂದಿಸುವಂತೆ ಹೇಳಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا