Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಶಿವಮೊಗ್ಗ: 05 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಮಹಾನಗರ ಪಾಲಿಕೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸರ್ಕಾರ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದ್ದು, ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ (ಮಹಿಳೆ) ಮತ್ತು ಉಪಮೇಯರ್ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ. ಮೀಸಲಾತಿ ಆಧಾರದಲ್ಲಿ ಬಿಜೆಪಿ ಪಕ್ಷದಲ್ಲಿ ಆಟೋ ಚಾಲಕನ ಪತ್ನಿಯಾಗಿರುವ ಲತಾ ಗಣೇಶ್ ಅವರಿದ್ದಾರೆ. ಹಾಗಾಗಿ ಅವರಿಗೆ ಮೇಯರ್ ಸ್ಥಾನ ಎಂಬುದು ಬಹುತೇಕ ಖಚಿತವಾಗಿದೆ. ಆಟೋ ಚಾಲಕನ ಪತ್ನಿಯಾಗಿರುವ ಲತಾ ಗಣೇಶ್ ಅವರ ಪಾಲಿಗೆ ಶಿವಮೊಗ್ಗ ನಗರಪಾಲಿಕೆಯ ಮೇಯರ್ ಗಿರಿ ಒಲಿದು ಬಂದಿದೆ.
ಲತಾ ಗಣೇಶ, ಗಾಡಿಕೊಪ್ಪ 6ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕೊನೆ ಗಳಿಗೆಯಲ್ಲಿ ಟಿಕೆಟ್ ದಕ್ಕಿಸಿಕೊಂಡು ಸ್ಪರ್ಧೆಗೆ ಇಳಿದಿದ್ದರು. ಪರಿಶಿಷ್ಠ ಜಾತಿ ಮಹಿಳಾ ಕ್ಷೇತ್ರವಾದ ಇಲ್ಲಿ ಗೆಲವನ್ನೂ ದಾಖಲಿಸಿದ್ದರು. ಇದಲ ಬೆನ್ನಲ್ಲೇ ಸರ್ಕಾರ ಶಿವಮೊಗ್ಗ ನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿರಿಸಿ ಆದೇಶ ಹೊರಡಿಸಿದ್ದು, ಬಿಜೆಪಿಯಲ್ಲಿ ಈ ಸ್ಥಾನಕ್ಕೆ ಅರ್ಹರಾಗಿರುವವರು ಇವರೊಬ್ಬರೇ ಆಗಿದ್ದಾರೆ. ಹೀಗಾಗಿ ನಗರ ಪಾಲಿಕೆ ಸದಸ್ಯರಾಗಿ ಗೆದ್ದ ಬೆನ್ನಲ್ಲೇ ಪಾಲಿಕೆಯ ಮೇಯರ್ ಸ್ಥಾನ ಅವರನ್ನು ಹುಡುಕಿಕೊಂಡು ಬಂದಿದೆ.
ಲತಾ ಅವರ ಪತಿ ಗಣೇಶ್ ಅವರು ಸಾಮಾನ್ಯ ಆಟೋ ಚಾಲಕರಾಗಿದ್ದು, ನಿತ್ಯದ ಬದುಕಿಗೆ ಆಟೋ ಇವರ ಪಾಲಿಗೆ ದುಡಿಮೆಯ ಆಧಾರ. ಮೂರು ಜನ ಹೆಣ್ಣು ಮಕ್ಕಳು, ಒಪ್ಪ ಪುತ್ರ ಇವರ ಕುಟುಂಬ. ಪುತ್ರ ಇದೀಗ ಹುಬ್ಬಳ್ಳಿಯಲ್ಲಿ ಆಟೋ ಚಾಲಕನಾಗಿದ್ದಾರೆ. ಗಾಡಿಕೊಪ್ಪದ ಮೊದಲ ಕ್ರಾಸ್ ನಲ್ಲಿ ಬಾಡಿಗೆ ಮನೆಯೊಂದರಲ್ಲಿ ಇವರ ವಾಸವಿದೆ.
ಲತಾ ಗಣೇಶ್ ಅವರಿಗೆ ರಾಜಕೀಯ ಹೊಸದೇನಲ್ಲ. ಲತಾ ಅವರ ಸಹೋದರ ಆರ್.ಲಕ್ಷಣ್ ಬಿಜೆಪಿಯಲ್ಲಿ ಸಕ್ರಿಯ ಮುಖಂಡರಾಗಿದ್ದಾರೆ. ಈ ಹಿಂದೆ ಹೊಸಮನೆ ಬಡಾವಣೆಯಿಂದ ನಗರಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಇವರ ನೆರಳಿನಲ್ಲಿ ರಾಜಕಾರಣ ಆರಂಭಿಸಿದ್ದ ಲತಾ ಗಣೇಶ್, ಬಿಜೆಪಿ ಮಹಿಳಾ ಮೋರ್ಚಾದಲ್ಲಿ ಗುರ್ತಿಸಿಕೊಂಡಿದ್ದರು. ಗಾಡಿಕೊಪ್ಪದಲ್ಲಿ ಬಿಜೆಪಿಯನ್ನು ಸಂಘಟಿಸುತ್ತಾ ಗಾಡಿಕೊಪ್ಪ ವಾರ್ಡ್'ನ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |