Urdu   /   English   /   Nawayathi

ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ, ಹತ್ಯೆ ತಡೆಗಟ್ಟದ 18 ರಾಜ್ಯಗಳ ವಿರುದ್ಧ ಸುಪ್ರೀಂ ಗರಂ

share with us

ನವದೆಹಲಿ: 08 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ ಹಾಗೂ ದೊಂಬಿ ಹತ್ಯೆ ತಡೆಗಟ್ಟುವ ಕುರಿತು ಕ್ರಮಗೊಳ್ಳಲು ತಾನು ನೀಡಿದ್ದ ಆದೇಶವನ್ನು ಪಾಲಿಸದ 18 ರಾಜ್ಯಗಳ ಬಗ್ಗೆ ಸುಪ್ರೀಂಕೋರ್ಟ್ ಇಂದು ಗರಂ ಆಗಿದೆ. ಈ ಸಂಬಂಧ ಒಂದು ವಾರದೊಳಗೆ ವರದಿ ಸಲ್ಲಿಸಲು ಈ ರಾಜ್ಯಗಳಿಗೆ ಕಟ್ಟ ಕಡೆ ಅವಕಾಶ ನೀಡಿದೆ.  29 ರಾಜ್ಯಗಳಲ್ಲಿ 11 ರಾಜ್ಯಗಳು ಹಾಗೂ ಏಳು ಕೇಂದ್ರಾಡಳಿತ ಪ್ರದೇಶಗಳು (ಯುಟಿಗಳು) ಮಾತ್ರ ತನ್ನ ಆದೇಶವನ್ನು ಪಾಲಿಸುವ ಬಗ್ಗೆ ವರದಿಗಳನ್ನು ಸಲ್ಲಿಸಿವೆ. ಆದರೆ ಉಳಿದ ರಾಜ್ಯಗಳು ಮತ್ತು ಯುಟಿಗಳು ಈ ಸಂಬಂಧ ಕ್ರಮ ಕೈಗೊಳ್ಳದಿರುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ ಹಾಗೂ ಉದ್ರಿಕ್ತ ಗುಂಪಿನಿಂದ ನಡೆಯುವ ಹಿಂಸಾಚಾರ ಮತ್ತು ಹತ್ಯೆಗಳನ್ನು ತಡೆಗಟ್ಟುವ ಕುರಿತು ಕ್ರಮಗೊಳ್ಳಲು ಸುಪ್ರೀಂಕೋರ್ಟ್ ಈಗಾಗಲೇ ಸೂಚನೆಗಳನ್ನು ನೀಡಿದೆ. ಇದನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ಸಂಬಂಧ ವರದಿಗಳನ್ನು ನೀಡಬೇಕು. ಇದನ್ನು ಸಲ್ಲಿಸದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೊನೆ ಅವಕಾಶ ನೀಡುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ತಿಳಿಸಿದೆ.

ಈ ವರದಿಗಳನ್ನು ಒಂದು ವಾರದೊಳಗೆ ವರದಿ ಸಲ್ಲಿಸಲು ವಿಫಲವಾದರೆ, ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಪೀಠ ತಿಳಿಸಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا