Urdu   /   English   /   Nawayathi

ಕಾರವಾರದಲ್ಲಿ ಬೈಕ್ ಅಪಘಾತ: ಸ್ಥಳದಲ್ಲೇ ಸವಾರನ ಸಾವು

share with us

ಕಾರವಾರ: 24 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಕಾರವಾರ ತಾಲೂಕಿನ ಮುದಗಾದಲ್ಲಿ ಇಂದು ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತಪಟ್ಟ ವ್ಯಕ್ತಿ ಹಟ್ಟಿಕೇರಿ ಜೆ,ಸಿ ಶಾಲೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ತೊಡೂರಿನ ನಿವಾಸಿ ಗುರುಪ್ರಸಾದ್ ನಾಯ್ಕ್(32) ಎಂದು ಹೇಳಲಾಗಿದೆ. ರಸ್ತೆಯ ಪಕ್ಕದಲ್ಲಿ ಶವವನ್ನು ಕಂಡ ಜನರು ತಕ್ಷಣ ಪೋಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೋಲೀಸರು ಪರಿಶೀಲಿಸಿ, ಈತ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೋ ಅಥವಾ ಬೇರೆ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೋ ಎಂದು ಇದುವರೆಗೂ ತಿಳಿಯಲಿಲ್ಲ ಎಂದು ಹೇಳಿದ್ದಾರೆ. ಕಾರವಾರದ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prayer Timings

Fajr فجر
Dhuhr الظهر
Asr أسر
Maghrib مغرب
Isha عشا