Urdu   /   English   /   Nawayathi

ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಚಿಕಿತ್ಸೆಯ ಶಿಬಿರ

share with us

ಭಟ್ಕಳ: 25 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸಾದ್ ನೇತ್ರಾಲಯ ಉಡುಪಿಯ ವತಿಯಿಂದ ಇಂದು ಬೆಳಿಗ್ಗೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಮತ್ತು ಉಚಿತ ಸಲಹೆಗಳನ್ನು ನೀಡುವ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಪ್ರಸಾದ್ ಸ್ಪೆಷಾಲಿಟಿ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ ಮತ್ತು ಸಾರ್ವಜನಿಕ ಆಸ್ಪತ್ರೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಈ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದಲ್ಲಿ ಸುಮಾರು ಎಂಭತ್ತೇಳು ರೋಗಿಗಳ ಕಣ್ಣು ಉಚಿತವಾಗಿ ತಪಾಸಣೆ ಮಾಡಲಾಯಿತು. ಹಾಗೂ ಸುಮಾರು ಮೂವತ್ತೊಂದು ರೋಗಿಗಳಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆಯೊಂದಿಗೆ ಉಡುಪಿಗೆ ಕರೆದುಕೊಂಡು ಹೋಗಿ ಕಣ್ಣಿನ ಶಸ್ತ್ರ ಚಿಕಿತ್ಸೆಯೊಂದಿಗೆ ಪುನಃ ಭಟ್ಕಳಕ್ಕೆ ತಂದು ಬಿಡುವ ಯೋಜನೆ ನಡೆಸಿದ್ದು, ಈ ಯೋಜನೆ ಸತತವಾಗಿ ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದು ಇದರಿಂದ ರೋಗಿಗಳಿಗೆ ಬಹಳಷ್ಟು ಉಪಯೋಗವಾಗಿದೆ. ಶಿಬಿರದಲ್ಲಿ ವಿಶೇಷ ನೇತ್ರ ತಜ್ಞರಾದ ಡಾ|| ರೋಹಿತ್ ಅವರು ರೋಗಿಗಳ ಕಣ್ಣುಗಳನ್ನು ತಪಾಸಣೆ ಮಾಡಿದರು.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا