Urdu   /   English   /   Nawayathi

ಸಹನೆ ಕಳೆದುಕೊಂಡು ಎಸಿ ಕಚೇರಿಗೆ ದಾಳಿ ಮಾಡಿದ ಜನ

share with us

ಬೆಳಗಾವಿ: 03 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತರೂ ನಮ್ಮ ಅಹವಾಲುಗಳನ್ನು ಕೇಳೋರಿಲ್ಲ. ಇದರಿಂದ ಬೇಸತ್ತ ಸಾರ್ವಜನಿಕರು ಎಸಿ ಕಚೇರಿಯ ಮೇಲ್ಭಾಗದಲ್ಲಿರುವ ಸ್ಪಂದನಾ ಕೇಂದ್ರದ ಗಾಜುಗಳನ್ನು ಒಡೆದು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆಯಿಂದಲೂ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ಜಿಲ್ಲಾಧಿಕಾರಿ ಕಟ್ಟಡದ ಮೇಲ್ಭಾಗದಲ್ಲಿರುವ ಸ್ಪಂದನಾ ಕೇಂದ್ರದಲ್ಲಿ ಸಾಲುಗಟ್ಟಿ ನಿಂತು ತಮ್ಮ ಅಹವಾಲುಗಳನ್ನು ಹಿಡಿದು ಸರದಿ ಸಾಲಿನಲ್ಲಿ ನಿಂತಿದ್ದರು.

ಆದರೆ, ಸಿಬ್ಬಂದಿ ಮಾತ್ರ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಮುಂದೆ ಬರಲಿಲ್ಲ. ಕಾದು ಕಾದು ಸುಸ್ತಾದ ಸಾರ್ವಜನಿಕರು ರೊಚ್ಚಿಗೆದ್ದು ಸ್ಪಂದನಾ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಪ್ರತಿಭಟನಾಕಾರರ ಮನವೊಲಿಸಿ ಅಹವಾಲುಗಳನ್ನು ಆಲಿಸಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا