Urdu   /   English   /   Nawayathi

ಬಿಜೆಪಿಗೆ ಒಂದೇ ಒಂದು ಸ್ಥಾನ ಗೆಲ್ಲಲು ಬಿಡಲ್ಲ : ಮೋದಿಗೆ ದೀದಿ ಸವಾಲ್

share with us

ನವದೆಹಲಿ: 06 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್(ಟಿಎಂಪಿ) ಪರಮೋಚ್ಚ ನಾಯಕಿ ಮಮತಾ ಬ್ಯಾನರ್ಜಿ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಹೊಸ ಸವಾಲು ಹಾಕಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆ ಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನ ಗೆಲ್ಲಲು ಬಿಡುವುದಿಲ್ಲ ಎಂದು ಮಮತಾ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಅಧಿಕಾರದಿಂದ ಬಿಜೆಪಿಯನ್ನು ಪದಚ್ಯುತಗೊಳಿಸಲು ಎಲ್ಲ ಸಮಾನ ಪಕ್ಷಗಳು ಒಗ್ಗೂಡು ವಂತೆ ದೀದಿ ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಆಟ ನಡೆಯುವುದಿಲ್ಲ. ಆ ಪಕ್ಷವು ನಮ್ಮ ರಾಜ್ಯದಲ್ಲಿ ಗೆಲ್ಲಬೇಕೆಂದು ಹೆಣೆಯುತ್ತಿರುವ ತಂತ್ರ- ಕಾರ್ಯತಂತ್ರಗಳು ಈಡೇರು ವುದಿಲ್ಲ. ಇಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲು ನಾವು ಬಿಜೆಪಿಗೆ ಆಸ್ಪದ ನೀಡುವುದಿಲ್ಲ ಎಂದು ಟಿಎಂಸಿ ಅಧಿನಾಯಕಿ ಸವಾಲು ಹಾಕಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا