Urdu   /   English   /   Nawayathi

ಅಪ್ರಾಪ್ತೆಯನ್ನು ಮದುವೆಯಾಗಿ ತಲೆಮರೆಸಿಕೊಂಡಿದ್ದ ಚಪಲಚನ್ನಿಗರಾಯ ಈಗ ಪೊಲೀಸರ ಅತಿಥಿ

share with us

ತುಮಕೂರು: 07 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ತೋಟದ ಕೆಲಸ ಮಾಡಿಕೊಂಡಿದ್ದ ವಿವಾಹಿತ ವ್ಯಕ್ತಿಯೊಬ್ಬ ಅಪ್ರಾಪ್ತಳನ್ನು ಪುಸಲಾಯಿಸಿ ಮದುವೆಯಾಗಿರುವ ಪ್ರಕರಣ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿ, ಕಣಿವೆ ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿವಮೂರ್ತಿ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗದ ಸೂರಪ್ಪನಹಟ್ಟಿ ಗ್ರಾಮದ ಶಿವಣ್ಣ ಅಲಿಯಾಸ್ ಶಿವಮೂರ್ತಿ ತೋವಿನಕೆರೆ ಸಮೀಪದ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಈತನಿಗೆ ಈಗಾಗಲೇ ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಕಳೆದ ಐದು ವರ್ಷದ ಹಿಂದೆ ತೋಟದ ಕೆಲಸಕ್ಕಾಗಿ ಬಂದಿದ್ದ ಈತ ಕಾಲೇಜಿಗೆ ಹೋಗುವ ಅಪ್ರಾಪ್ತಳನ್ನು ಮಾತನಾಡಿಸುತ್ತ ಮರುಳು ಮಾಡಿದ್ದಾನೆ. ಆಕೆಯನ್ನು ಕಾಲೇಜಿಗೆ ಕರೆದುಕೊಂಡು ಹೋಗುವುದು, ಕರೆದುಕೊಂಡು ಬರುವುದು ಮಾಡುತ್ತಿದ್ದ. ಆರೋಪಿ ಇತ್ತೀಚೆಗೆ ಮದುವೆ ಕೂಡ ಮಾಡಿಕೊಂಡಿದ್ದಾನೆ.

ವಿಷಯ ತಿಳಿದ ಪೊೀಷಕರು ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಪಿಎಸ್‍ಐ ಮಂಜುನಾಥ್ ಕಾರ್ಯಾಚರಣೆ ನಡೆಸಿ ಮಾಗಡಿ ತಾಲೂಕಿನ ಒಳಕಲ್ ಬಳಿ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೂರ್ತಿ ಮೇಲೆ ಪೊೀಸ್ಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತಳನ್ನು ತುಮಕೂರಿನ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا