Urdu   /   English   /   Nawayathi

ಎರಡು ಕೊಲೆ ಪ್ರಕರಣಗಳಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ: ಹರ್ಯಾಣ ಕೋರ್ಟ್ ತೀರ್ಪು

share with us

ಹಿಸಾರ್(ಹರ್ಯಾಣ): 11 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಸ್ವಯಂ ಘೋಷಿತ ದೇವಮಾನವ ರಾಂಪಾಲ್ ನನ್ನು ಎರಡು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹರ್ಯಾಣದ ಹಿಸಾರ್ ನ ನ್ಯಾಯಾಲಯ ಅಪರಾಧಿ ಎಂದು ಸಾಬೀತುಪಡಿಸಿದೆ. ಶಿಕ್ಷೆಯ ಪ್ರಮಾಣ ಇದೇ ತಿಂಗಳು 16 ಅಥವಾ 17ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅಪಾರ ಅನುಯಾಯಿಗಳನ್ನು ಹೊಂದಿರುವ ರಾಂಪಾಲ್ ನನ್ನು ಹಿಸಾರ್ ನ ಕೇಂದ್ರ ಕಾರಾಗೃಹ-2ರಲ್ಲಿರಿಸಲಾಗಿದೆ.

2015ರಲ್ಲಿ ಪೊಲೀಸರು ಮತ್ತು ರಾಂಪಾಲ್ ನ ಭಕ್ತರ ನಡುವೆ ತೀವ್ರ ವಾದ-ವಿವಾದಗಳು ನಡೆದ ನಂತರ ಕೊನೆಗೂ ರಾಂಪಾಲ್ ನನ್ನು ಬಂಧಿಸಲಾಗಿತ್ತು. ಬಾರ್ವಾಲದಲ್ಲಿರುವ ರಾಂಪಾಲ್ ನ ಸತ್ಲೋಕ್ ಆಶ್ರಮದ ಹೊರಗೆ ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾದ ಹಿನ್ನಲೆಯಲ್ಲಿ ರಾಂಪಾಲ್ ನನ್ನು ಬಂಧಿಸಲಾಗಿತ್ತು. ಮತ್ತೊಂದು ಬಾರಿ ಆಶ್ರಮದಲ್ಲಿ  ಮತ್ತೊಬ್ಬ ಮಹಿಳೆಯ ಶವ ಸಿಕ್ಕಿದ ಹಿನ್ನಲೆಯಲ್ಲಿ ರಾಂಪಾಲ್ ವಿರುದ್ಧ ಮತ್ತೊಂದು ಕೇಸು ದಾಖಲಾಗಿತ್ತು.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಸುಮಾರು 80 ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ ಎಂದು ರಾಂಪಾಲ್ ಪರ ವಕೀಲ ಎಂಎಸ್ ನಾಯನ್ ತಿಳಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا