Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಒರ್ಲ್ಯಾಂಡೊ: 16 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಭಾರತದಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ವಿವಾದ ಹಸಿರಾಗಿರುವಾಗಲೇ 201ರಿಂದಲೇ ರಾಫೆಲ್ ಯುದ್ಧ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಡಸ್ಸಾಲ್ಟ್ ಏವಿಯೇಷನ್ ಸಂಸ್ಥೆಯ ಸಿಇಒ ಎರಿಕ್ ಟ್ರ್ಯಾಪಿಯರ್ ಹೇಳಿದ್ದಾರೆ. ಅಮೆರಿಕದ ಒರ್ಲಾಂಡೋದಲ್ಲಿ ನಡೆಯುತ್ತಿರುವ ವಿಶ್ವದ ಅತೀ ದೊಡ್ಡ ಜೆಟ್ ವಿಮಾನಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸುದ್ದಿಸಂಸ್ಥೆಯೊಂದರೊಂದಿಗೆ ಮಾತನಾಡಿದ ರಾಫೇಲ್ ಜೆಟ್ ಯುದ್ಧ ವಿಮಾನ ತಯಾರಕ ಕಂಪನಿ ಫ್ರಾನ್ಸ್ ನ ಡಸಾಲ್ಟ್ ಕಂಪನಿ ಸಿಇಒ ಎರಿಕ್ ಟ್ರ್ಯಾಪಿಯರ್ ಅವರು, 2019ರ ಮಧ್ಯಭಾಗದಿಂದ ಭಾರತಕ್ಕೆ ರಾಫೆಲ್ ಯುದ್ಧ ವಿಮಾನಗಳು ಹಸ್ತಾಂತರವಾಗಲಿದೆ.
ಅಲ್ಲದೆ ಪ್ರಸ್ತುತ 36 ರಾಫೆಲ್ ಯುದ್ಧ ವಿಮಾನಗಳಿಗೆ ಒಪ್ಪಂದವಾಗಿದ್ದು, ಭವಿಷ್ಯದ ದಿನಗಳಲ್ಲಿ ಮತ್ತಷ್ಟು ವಿಮಾನಗಳನ್ನು ಖರೀದಿಸುವ ಕುರಿತು ಭಾರತ ಸರ್ಕಾರ ಒಲವು ತೋರಬಹುದು ಎಂದು ಎರಿಕ್ ಟ್ರ್ಯಾಪಿಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಭಾರತದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೇಲ್ ಡೀಲ್ ಕುರಿತಂತೆ ಇದೊಂದು ದೊಡ್ಡ ಹಗರಣ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅಲ್ಲದೆ ಯುದ್ಧವಿಮಾನ ಒಪ್ಪಂದ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದೂ ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು, ರಾಫೇಲ್ ಯುದ್ಧ ವಿಮಾನಗಳ ಬಿಡಿಭಾಗಗಳ ತಯಾರಿಕೆಗೆ ಡಸಾಲ್ಟ್ ಕಂಪನಿ ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಅನ್ನು ಆಯ್ಕೆ ಮಾಡಿಕೊಂಡಿದೆ. ಆದರೆ ರಿಲಯನ್ಸ್ ಅನ್ನು ಆಯ್ಕೆ ಮಾಡಿಕೊಂಡದ್ದು ಡಸಾಲ್ಟ್ ಕಂಪನಿ ನಿರ್ಧಾರವಲ್ಲ. ಬದಲಾಗಿ ಕೇಂದ್ರ ಸರ್ಕಾರವೇ ಅನಿಲ್ ಅಂಬಾನಿಗೆ ನೆರವು ನೀಡುವ ಸಲುವಾಗಿ ರಿಲಯನ್ಸ್ ಅನ್ನು ಆಯ್ಕೆ ಮಾಡಿಕೊಳ್ಳುವಂತೆ ಡಸಾಲ್ಟ್ ಮೇಲೆ ಒತ್ತಡ ಹೇರಿತ್ತು ಎಂದು ಆರೋಪಿಸಿತ್ತು.
ಅಲ್ಲದೆ ಇತ್ತೀಚೆಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಫ್ರಾನ್ಸ್ ಗೆ ಭೇಟಿ ನೀಡಿದ್ದರು. ಅಲ್ಲದೆ ಡಸಾಲ್ಟ್ ಕಂಪನಿಗೂ ಭೇಟಿ ನೀಡಿದ್ದರು. ರಫೇಲ್ ಡೀಲ್ ವಿವಾದವನ್ನು ಮುಚ್ಚಿ ಹಾಕಲು ನಿರ್ಮಲಾ ಸೀತಾರಾಮನ್ ಫ್ರಾನ್ಸ್ ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |