Urdu   /   English   /   Nawayathi

ಅಪಘಾತದಲ್ಲಿ ಮೃತಪಟ್ಟ ಭಟ್ಕಳದ ವಿದ್ಯಾರ್ಥಿ

share with us

ಭಟ್ಕಳ: 17 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಭಟ್ಕಳ ಜಾಲಿಕೋಡಿ ಕರಿಕಲ್ ರಸ್ತೆಯಲ್ಲಿ ಮಂಗಳವಾರದಂದು ಮಧ್ಯಾಹ್ನ ಮಹೇಂದ್ರ ಜೀತೋ ಹಾಗೂ ಪಲ್ಸರ್ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಎರಡು ವಾಹನಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ತಲೆಗೆ ಬಲವಾದ ಪೆಟ್ಟಾಗಿದ್ದು, ಸ್ಥಳೀಯರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಧ್ಯ ದಾರಿಯಲ್ಲಿ ಮೃತಪಟ್ಟಿದ್ದಾನೆ. ಮೃತಪಟ್ಟವನು ವಿದ್ಯಾರ್ಥಿ ಅಖಿಲೇಶ್ ಎಂದು ಗುರುತಿಸಲಾಗಿದೆ. ಅಖಿಲೇಶ್ ಭಟ್ಕಳದಿಂದ ಕರಿಕಲ್ಲಿಗೆ ಹೋಗುವ ವೇಳೆ ಎದುರಿನಿಂದ ಸರಕು ತುಂಬಿಕೊಂಡು ಭಟ್ಕಳಕ್ಕೆ ಬರುತ್ತಿದ್ದ ಮಹೇಂದ್ರ ಜೀತೋ ವಾಹನಕ್ಕೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮಹೇಂದ್ರ ವಾಹನದ ಚಾಲಕನ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا