Urdu   /   English   /   Nawayathi

ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ರಾಮುಲುಗಿಲ್ಲ: ರೇವಣ್ಣ

share with us

ಬೆಂಗಳೂರು: 19 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಶ್ರೀರಾಮುಲುಗೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಬಳ್ಳಾರಿಗೆ ದೇವೇಗೌಡರು ಬಂದರೆ ಅಡ್ರೆಸ್‌ ಇಲ್ಲದೇ ಹೋಗುತ್ತಾರೆ ಎಂದು ಶ್ರೀರಾಮುಲು ನೀಡಿರುವ ಹೇಳಿಕೆಗೆ ವಿಧಾನಸೌಧದಲ್ಲಿ ತಿರುಗೇಟು ನೀಡಿದ ಅವರು, ದೇವೇಗೌಡರ ಅಡ್ರೆಸ್‌ ಪದ್ಮನಾಭನಗರದಲ್ಲಿದೆ. ಮೊದಲು ಶ್ರೀರಾಮುಲು ಅಡ್ರೆಸ್‌ ಹುಡುಕಿಕೊಳ್ಳಲಿ ಎಂದು ತಿರುಗೇಟು ನೀಡಿದರು. 

ನಾಯಕ ಸಮುದಾಯಕ್ಕೆ ಕೊಡುಗೆ ಕೊಟ್ಟವರು ದೇವೇಗೌಡರು. ನಿನ್ನೆ ಮೊನ್ನೆ ಬಂದವರಿಗೆ ದೇವೇಗೌಡರ ಬಗ್ಗೆ ಏನು ಗೊತ್ತಿದೆ. ಅವರ ಬಗ್ಗೆ ಮಾತನಾಡುವ ನೈತಿಕತೆ ರಾಮುಲುಗೆ ಇಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಎಲ್ಲ ಅನುಭವಿಸಿ ಈಗ ಸುಧಾರಿಸಿಕೊಳ್ಳುತ್ತಿದ್ದಾರೆ. ಪಾಪ ಅವರ ಬಗ್ಗೆ ಈಗ ನಾನೇಕೆ ಮಾತನಾಡಲಿ ಎಂದು ವ್ಯಂಗ್ಯವಾಡಿದರು. ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಯಡಿಯೂರಪ್ಪ ಅವರಿಗೆ ಅರಳು ಮರಳು. ಹೀಗಾಗಿ ಅವರು ಏನೇನೋ ಮಾತನಾಡುತ್ತಾರೆ. ಒಂದು
ಲೋಕಸಭಾ ಕ್ಷೇತ್ರದಲ್ಲಿ 18 ಲಕ್ಷ ಮತದಾರರಿರುತ್ತಾರೆ. ಅವರೆಲ್ಲಾ ಯಡಿಯೂರಪ್ಪ ಅವರ ಜೇಬಿನಲ್ಲಿದ್ದಾರಾ ಎಂದು ಪ್ರಶ್ನಿಸಿದರು.

ಇದೇ ವೇಳೆ, ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಸ್ಪರ್ಧೆಯ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್‌ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಪ್ರಜ್ವಲ್‌ ಹಿಂಬಾಗಿಲಿನಿಂದ ರಾಜಕಾರಣ ಮಾಡುವ ಅಗತ್ಯವಿಲ್ಲ. ಪಕ್ಷ ಅವನಿಗೆ ಎಲ್ಲವನ್ನೂ ಕೊಡುತ್ತದೆ. ಹೀಗಾಗಿ
ಅವನಿಗೆ ಸ್ಪರ್ಧಿಸುವ ಅವಕಾಶ ಬಂದರೆ ಸೂಕ್ತ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾನೆ ಎಂದರು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا