Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ : 20 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) 'ಅಮೃತಸರ ಅವಘಡವನ್ನು ತಾನು ರೈಲು ಅಪಘಾತಗಳ ಪಟ್ಟಿಗೆ ಸೇರಿಸುವುದಿಲ್ಲ. ಇದೊಂದು ರೈಲು ಅಪಘಾತ ಅಲ್ಲ, ಹಾಗಾಗಿ ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡುವುದಿಲ್ಲ' ಎಂದು ಭಾರತೀಯ ರೈಲ್ವೆ ಹೇಳಿದೆ. ಕೇಂದ್ರ ಸಹಾಯಕ ರೈಲ್ವೆ ಸಚಿವ ಮನೋಜ್ ಸಿನ್ಹಾ ಅವರು "ಘಟನೆಯ ಬಗ್ಗೆ ಯಾವುದೇ ತನಿಖೆಯನ್ನು ಕೈಗೊಳ್ಳುವ ಅಗತ್ಯ ರೈಲ್ವೇ ಗೆ ಇಲ್ಲ; ರೈಲಿನ ಚಾಲಕರಿಗೆ ಎಲ್ಲಿ ರೈಲನ್ನು ನಿಧಾನವಾಗಿ ಚಲಾಯಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಸೂಚನೆಗಳಿದ್ದವು; ಅವಘಡ ನಡೆದಲ್ಲಿ ತಿರುವುಗಳಿದ್ದವು; ಹಾಗಾಗಿ ರೈಲಿನ ಚಾಲಕರಿಗೆ ಜನರು ಹಳಿಯಲ್ಲಿ ನಿಂತಿರುವುದು ಗೋಚರಿಸಿರಲಿಲ್ಲ. ಹಾಗಾಗಿ ನಾವು ಯಾವುದರ ಬಗ್ಗೆ ತನಿಖೆ ನಡೆಸಬೇಕು ? ರೈಲುಗಳಿರುವುದೇ ವೇಗವಾಗಿ ಸಾಗಲು' ಎಂದು ಹೇಳಿದ್ದಾರೆ.
ನ್ಯಾಯಾಂಗ ತನಿಖೆ: ಕ್ಯಾಪ್ಟನ್ ಅಮರೀಂದರ್ ಸಿಂಗ್
ಅಮೃತಸರ ರೈಲು ಅವಘಡ ನಡೆದು ಒಂದು ದಿನದ ತರುವಾಯ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಇಂದು ಶನಿವಾರ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಳುಗಳನ್ನು ಭೇಟಿಯಾದರಲ್ಲ ಅವಘಡದ ನ್ಯಾಯಾಂಗ ತನಿಖೆಗೆ ಆದೇಶಿಸಿದರು.
ರೈಲು ದುರಂತವನ್ನು ಎಲ್ಲ ಆಯಾಮಗಳಿಂದ ತನಿಖೆ ಮಾಡಲಾಗುವುದು ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ರೈಲು ದುರಂತದ ಸಂತ್ರಸ್ತರ ಬಗ್ಗೆ ಪಂಜಾಬ್ ಮತ್ತು ಭಾರತ ರಾಷ್ಟ್ರದ ಜನರ ಸಹಾನುಭೂತಿ ಇದೆ. ಘಟನೆಯ ತನಿಖೆಗಾಗಿ ಆಳಕ್ಕೆ ಇಳಿಯುವ ಬದ್ಧತೆ ಪಂಜಾಬ್ ಸರಕಾರಕ್ಕೆ ಇದೆ; ಹೆಚ್ಚಿನ ಮೃತ ದೇಹಗಳನ್ನು ಈಗಾಗಲೇ ಗುರುತಿಸಲಾಗಿದ್ದು ಈಗ ಕೇವಲ 9 ಮೃತದೇಹಗಳು ಮಾತ್ರವೇ ಬಾಕಿ ಉಳಿದಿವೆ; ಅವುಗಳನ್ನೂ ಬೇಗನೆ ಗುರುತಿಸಲಾಗುವುದು ; ನಾವು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು ನಾಲ್ಕು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಕೋರಿದ್ದೇವೆ' ಎಂದು ಸಿಎಂ ಅಮರೀಂದರ್ ಸಿಂಗ್ ಹೇಳಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |