Urdu   /   English   /   Nawayathi

ಕೆರೆಗೆ ಬಸ್ ಉರುಳಿ ಬಿದ್ದು 7 ಪ್ರಯಾಣಿಕರ ದುರ್ಮರಣ

share with us

ಗುವಾಹತಿ: 21 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕೆರೆಗೆ ಉರುಳಿ ಏಳು ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡ ಘಟನೆ ಅಸ್ಸಾಂ ರಾಜಧಾನಿ ಗುವಾಹತಿಯಲ್ಲಿ ಸಂಭವಿಸಿದೆ.  ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಗುವಾಹತಿ ಮತ್ತು ಮುಕಲ್‍ಮುವಾ ನಡುವೆ ಈ ಭೀಕರ ದುರಂತ ಸಂಭವಿಸಿದೆ.   ಅಸ್ಸಾಂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿತ್ತು. ಈ ದುರ್ಘಟನೆಯಲ್ಲಿ ಮೂವರು ಮಹಿಳೆಯರೂ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 21 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್ ಸಂತಾಪ ಸೂಚಿಸಿ, ಗಾಯಾಳುಗಳಿಗೆ ಸಾಂತ್ವನ ಹೇಳಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا