Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 29 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಹಳಿ ಮೇಲೆ ಕುಳಿತ್ತಿದ್ದ ಮೂವರು ವ್ಯಕ್ತಿಗಳಿಗೆ ರೈಲಿ ಡಿಕ್ಕಿ ಹೊಡೆದು ಅವರು ಛಿದ್ರಛಿದ್ರವಾಗಿರುವ ದಾರುಣ ಘಟನೆ ರಾಜಧಾನಿ ದೆಹಲಿಯ ನಾಂಗ್ಲೋಯಿ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಮೂವರು ಬೆಳಗ್ಗೆಯೇ ಪಾನಮತ್ತರಾಗಿದ್ದರೆಂದು ಹೇಳಲಾಗಿದೆ. ಮದ್ಯಪಾನ ಮಾಡಿ ಬೆಳಗ್ಗೆ 7.15ರಲ್ಲಿ ಇವರು ರೈಲ್ವೆ ಹಳಿ ಮೇಲೆ ಕುಳಿತ್ತಿದ್ದರು.
ಇದೇ ಸಂದರ್ಭದಲ್ಲಿ ಬಿಕನೇರ್-ದೆಹಲಿ ಎಕ್ಸ್ಪ್ರೆಸ್ ರೈಲು ಇವರಿಗೆ ಡಿಕ್ಕಿ ಹೊಡೆಯಿತು. ಇವರು ಛಿದ್ರ ಛಿದ್ರವಾಗಿ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ಧಾರೆ. ಇವರು ಟ್ರ್ಯಾಕ್ ಮೇಲೆ ಕುಳಿತಿರುವುದನ್ನು ದೂರದಲ್ಲೇ ಗಮನಿಸಿದ ರೈಲ್ವೆ ಚಾಲಕ ಸೈರನ್ ಮೂಲಕ ಎಚ್ಚರಿಕೆ ನೀಡಿದ್ದರೂ ಈ ಮೂವರು ಹಳಿಯಿಂದ ಕದಲಿಲ್ಲ. ರೈಲು ಅಪ್ಪಳಿಸಿದ ರಭಸಕ್ಕೆ ಅವರ ದೇಹಗಳು ನಜ್ಜುಗುಜ್ಜಾಗಿ ಛಿದ್ರವಾಗಿವೆ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ.
ವಿಜಯದಶಮಿ ದಿನದಂದು ಪಂಜಾಬ್ನ ಅಮೃತಸರ್ನಲ್ಲಿ ರಾವಣ ದಹನ ಆಚರಣೆಗಾಗಿ ರೈಲು ಹಳಿಗಳ ಮೇಲೆ ಜಮಾಹಿಸಿದ್ದ ಗುಂಪಿನ ಮೇಲೆ ರೈಲು ನುಗ್ಗಿ 60ಕ್ಕೂ ಹೆಚ್ಚು ಮಂದಿ ಮೃತಪಟ್ಟ ಭೀಕರ ಘಟನೆಯನ್ನು ಇಲ್ಲಿ ಉಲ್ಲೇಖಿಸಬಹುದು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |