Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಯುನೈಟೆಡ್ ನೇಷನ್ಸ್: 31 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಕಾಶ್ಮೀರ ವಿವಾದವನ್ನು ಪಾಕಿಸ್ತಾನ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಎತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತ, ಸಂಕುಚಿತ ರಾಜಕೀಯ ಲಾಭ ಪಡೆದುಕೊಳ್ಳಲು ಯಾವುದೇ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುವುದು ಪಾಕಿಸ್ತಾನದ ಅಭ್ಯಾಸವಾಗಿದೆ. ರಾಷ್ಟ್ರದ ಪ್ರಾದೇಶಿಕ ಸಮಗ್ರತೆಯನ್ನು ದುರ್ಬಲಗೊಳಿಸಲು ಸ್ವ ನಿರ್ಣಯದ ಹಕ್ಕನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
ವಿಶ್ವಸಂಸ್ಥೆಗೆ ಭಾರತದ ಖಾಯಂ ನಿಯೋಗದ ಮೊದಲ ಕಾರ್ಯದರ್ಶಿ ಪಲೋಮಿ ತ್ರಿಪಾಠಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ರಾಯಭಾರಿ ಮಲೀಹಾ ಲೊದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುತ್ತಿದ್ದರು. ಸ್ವನಿರ್ಣಯದ ಹುಕ್ಕುಗಳಿಗೆ ಕಾಶ್ಮೀರಿ ಜನತೆಯ ಹೋರಾಟವನ್ನು ದಶಕಗಳಿಂದ ಹತ್ತಿಕ್ಕಲಾಗುತ್ತಿದೆ ಎಂದರು.
ವಿಶ್ವಸಂಸ್ಥೆಯ ಆಶ್ರಯದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ವಿವರಿಸಿದ ಮಾದರಿಗಳ ಪ್ರಕಾರ ಕಾಶ್ಮೀರಿ ಜನರಿಗೆ ತಮ್ಮ ಆಶಯಗಳನ್ನು ಮುಕ್ತವಾಗಿ ಹೇಳಿಕೊಳ್ಳುವ ಸಮಯ ಬರುವವರೆಗೆ ಕಾಶ್ಮೀರ ವಿವಾದ ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಉಳಿಯಲಿದೆ ಎಂದಿದ್ದಾರೆ.
ಭಾರತದ ಆಂತರಿಕ ಭಾಗವಾಗಿರುವ ಜಮ್ಮು-ಕಾಶ್ಮೀರದ ಸ್ಥಿತಿಗತಿ ಬಗ್ಗೆ ಒಂದು ನಿಯೋಗ ಮಾಡಿರುವ ಅನಧಿಕೃತ ಉಲ್ಲೇಖವನ್ನು ನಾವು ತಿರಸ್ಕರಿಸುತ್ತೇವೆ ಎಂಗು ತ್ರಿಪಾಠಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಮೂರನೇ ಸಮಿತಿ ಸಭೆಯಲ್ಲಿ ನಿನ್ನೆ ಹೇಳಿದ್ದಾರೆ.
ಸಂಕುಚಿತ ರಾಜಕೀಯ ಲಾಭಕ್ಕಾಗಿ ಯಾವುದೇ ವೇದಿಕೆಯನ್ನು ದುರುಪಯೋಗ ಮಾಡುವುದು ಪಾಕಿಸ್ತಾನದ ಅಭ್ಯಾಸವಾಗಿಬಿಟ್ಟಿದೆ. ನಮ್ಮ ಗಡಿ ಭಾಗದಲ್ಲಿ ಭಯೋತ್ಪಾದನೆಯಂತಹ ಕುಕೃತ್ಯಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು ಭಾರತದ ಗಡಿಭಾಗದ ಜನರು ಪ್ರತಿನಿತ್ಯ ತೊಂದರೆಯಿಂದ ಬಳಲುತ್ತಿದ್ದಾರೆ ಎಂದರು.
ವಸಾಹತು ವಿಮೋಚನೆ ಹಂತದಲ್ಲಿರುವ 17 ಸ್ವಯಂ ಆಡಳಿತವಿಲ್ಲದ ಪ್ರದೇಶಗಳಿದ್ದು ಇವುಗಳ ಸಮಸ್ಯೆಗಳನ್ನು ಬಗೆಹರಿಸಲು ಅಂತಾರಾಷ್ಟ್ರೀಯ ಸಮುದಾಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |