Urdu   /   English   /   Nawayathi

ರೆಡ್ಡಿ ಶಾಪದ ಹೇಳಿಕೆ : ಡ್ಯಾಮೇಜ್ ಕಂಟ್ರೋಲ್‍ಗೆ ಬಿಜೆಪಿ ಯತ್ನ

share with us

ಬೆಂಗಳೂರು: 31 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರನ ಸಾವಿನ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್‍ಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಸ್ನೇಹಿತ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ಶಾಸಕ ಶ್ರೀರಾಮುಲು ಇಂದು ಬಹಿರಂಗ ಕ್ಷಮೆಯಾಚಿಸಿದ್ದಾರೆ. ಜನಾರ್ದನ ರೆಡ್ಡಿ ಹೇಳಿಕೆ ಒಪ್ಪುವಂತಹದ್ದಲ್ಲ. ಅದಕ್ಕಾಗಿ ನಾನು ಜನರ ಕ್ಷಮೆ ಕೇಳುತ್ತೇನೆ ಎಂದು ಬಳ್ಳಾರಿಯ ಕಂಪ್ಲಿಯ ಮೆಟ್ರಿ ಗ್ರಾಮದಲ್ಲಿಂದು ಶ್ರೀರಾಮುಲು ಕ್ಷಮೆಯಾಚಿಸಿದ್ದಾರೆ.

ಈ ಮಧ್ಯೆ ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜನಾರ್ದನ ರೆಡ್ಡಿ ಹೇಳಿಕೆ ಅವರಿಗೆ ಶೋಭೆ ತರುವಂಥದ್ದಲ್ಲ. ಇದನ್ನು ನಾನು ಖಂಡಿಸುತ್ತೇನೆ. ಸಿದ್ದರಾಮಯ್ಯ ಅವರೊಂದಿಗೆ ಕ್ಷಮೆಕೋರುವಂತೆ ರೆಡ್ಡಿಗೆ ನಾನು ಒತ್ತಾಯಿಸುತ್ತೇನೆ. ಯಾರು ಕೂಡ ವೈಯಕ್ತಿಕ ನೆಲೆಯಲ್ಲಿ ಟೀಕೆ ಮಾಡಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಪುತ್ರನ ಸಾನ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆ ಕೋರಿದ್ದಾರೆ. ಕ್ಷಮಿಸುವುದು ದೊಡ್ಡ ಗುಣ. ಆದರೆ ಚುನಾವಣೆಯಲ್ಲಿ ಆರೋಪ ಸಹಜ. ಆದರೆ ವೈಯಕ್ತಿಕ ನೆಲೆಯಲ್ಲಿ ದಾಳಿ ನಡೆಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا