Urdu   /   English   /   Nawayathi

ಭಟ್ಕಳದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಸಭೆ

share with us

ಭಟ್ಕಳ: 03 ನವೆಂಬರ್ (ಫಿಕ್ರೋಖಬರ್ ಸುದ್ದಿ) ಭಟ್ಕಳದ ಸುಧೀಂದ್ರ ಕಾಲೇಜಿನಲ್ಲಿ ಇಂದು ಭ್ರಷ್ಟಾಚಾರ ನಿಗ್ರಹ ದಳದವರು ಸಾರ್ವಜನಿಕರಲ್ಲಿ ಎಚ್ಚರ ಮೂಡಿಸುವ ಸಭೆಯನ್ನು ನಡೆಸಿದರು. ಸಾರ್ವಜನಿಕ ನೌಕರರು ನ್ಯಾಯಯುತವಾಗಿ ಮಾಡಬೇಕಾದ ಸಾರ್ವಜನಿಕ ಕೆಲಸಕ್ಕೆ ಲಂಚದ ಹಣಕ್ಕಾಗಿ ಒತ್ತಾಯಿಸುವುದು, ಲಂಚ ಪಡೆಯುವುದು, ಲಂಚದ ರೂಪದಲ್ಲಿ ಬೇರೆ ಪ್ರತಿಫಲಗಳನ್ನು ಪಡೆಯುವುದು ಹಾಗೂ ಸಾರ್ವಜನಿಕ ಹುದ್ದೆಯನ್ನು ಬಳಸಿಕೊಂಡು ಬೇರೆ ರೀತಿಯ ಅವ್ಯವಹಾರಗಳನ್ನು ನಡೆಸುತ್ತಿದ್ದು, ಇವೆಲ್ಲವೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ಅಪರಾಧವಾಗಿದೆ. ಇದಕ್ಕಾಗಿ ಸರ್ಕಾರವು ಭ್ರಷ್ಟಾಚಾರ ನಿಗ್ರಹ ದಳವನ್ನು ರಚಿಸಿದ್ದು, ಮೇಲ್ಕಂಡ ಯಾವುದೇ ರೀತಿಯ ದೂರುಗಳಿದ್ದಲ್ಲಿ ಕಾರವಾರ ನಿಗ್ರಹ ದಳದ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا