Urdu   /   English   /   Nawayathi

ಹಿಟ್ಲರ್ ನಂತೆ ಇಂದಿರಾ ಆಡಳಿತ: ಖರ್ಗೆಗೆ ರವಿಶಂಕರ್ ಪ್ರಸಾದ್ ತಿರುಗೇಟು

share with us

ನವದೆಹಲಿ: 05 ನವೆಂಬರ್ (ಫಿಕ್ರೋಖಬರ್ ಸುದ್ದಿ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು  ಜರ್ಮನಿಯ ಸರ್ವಾಧಿಕಾರಿ  ಹಿಟ್ಲರ್ ಗೆ  ಹೋಲಿಸಿರುವ ಲೋಕಸಭೆಯಲ್ಲಿನ  ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾನೂನು ಸಚಿವ ರವಿಶಂಕರ್ ಪ್ರಸಾದ್  ತಿರುಗೇಟು ನೀಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ರೀತಿಯ ಹೇಳಿಕೆ ನೀಡಿರುವುದರಿಂದ ಆಘಾತವಾಗಿದೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಳ್ವಿಕೆ ನಾಜಿ ನಾಯಕ ಹಿಟ್ಲರ್ ಮಾದರಿಯಲ್ಲಿತ್ತು ಎಂದು  ಅವರು ಹೇಳಿದ್ದಾರೆ.

ಗಾಂಧಿ ಕುಟುಂಬದ ನಿಷ್ಠಾವಂತರಾಗಿರುವ ಖರ್ಗೆ, ಆ ಕುಟುಂಬದ ಅನುಮತಿ ಇಲ್ಲದೆ ಒಂದು ಇಂಚೂ ಕೂಡಾ ಅಲುಗಾಡುವುದಿಲ್ಲ ಇದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದಿದ್ದಾರೆ. ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಮಾದರಿಯಲ್ಲಿ ನರೇಂದ್ರ ಮೋದಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು.

ಆರ್ ಎಸ್ ಎಸ್ ಹಾಗೂ ಬಿಜೆಪಿ ಸಂವಿಧಾನವನ್ನು ನಾಶಪಡಿಸುತ್ತೇವೆ . ಆದರೆ. ಇದು ಆಗದಂತೆ  ಕಾಂಗ್ರೆಸ್ ಪಕ್ಷ ನೋಡಿಕೊಳ್ಳಲಿದೆ.ಸಂವಿಧಾನ ನಿರ್ಧಿಷ್ಟ ಸಮುದಾಯದ ಜನರಿಗೆ ಮಾತ್ರ ಸಿಮೀತವಾಗಿಲ್ಲ. ಇದು ಎಲ್ಲಾ ಭಾರತೀಯರಿಗೂ ಸಂಬಂದಿಸಿದೆ ಎಂದು ಖರ್ಗೆ ಹೇಳಿಕೆ ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆಯಲ್ಲಿ ಪತ್ರಿಕೆಗಳೂ ಹಾಗೂ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳಲಾಗಿದೆ  ಎಂದು ನರೇಂದ್ರ ಮೋದಿ ಆರೋಪಿಸಿದ್ದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا