Urdu   /   English   /   Nawayathi

'ಗಜ ಗಾಳಿ' ಗರ್ಜನೆ: ಬಂಗಾಲಕೊಲ್ಲಿಯಲ್ಲಿ ಚಂಡಮಾರುತ

share with us

ಚೆನ್ನೈ/ ಬೆಂಗಳೂರು: 12 ನವೆಂಬರ್ (ಫಿಕ್ರೋಖಬರ್ ಸುದ್ದಿ) ಬಂಗಾಲ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ 'ಗಜ' ಚಂಡಮಾರುತವು ಕ್ರಮೇಣ ತೀವ್ರಗೊಳ್ಳುತ್ತಿದ್ದು, ನ. 15ರ ಮುಂಜಾವ ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶ ನಡುವಿನ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದರಿಂದ ಮುಂದಿನ ವಾರಾಂತ್ಯದಲ್ಲಿ ಕರ್ನಾಟಕದಲ್ಲೂ ಮಳೆ ಸುರಿಯುವ ಸಾಧ್ಯತೆ ಇದೆ. ಬಂಗಾಲ ಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ರವಿವಾರ ಚಂಡಮಾರುತವಾಗಿ ರೂಪುಗೊಂಡಿತು.

ಇದು ಮುಂದಿನ 24 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ಮಾರ್ಪಾಡಾಗಲಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ. ಕರ್ನಾಟಕದ ವಿವಿಧೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌. ಪಾಟೀಲ ತಿಳಿಸಿದ್ದಾರೆ.

ಪ್ರಸ್ತುತ ಚಂಡಮಾರುತದ ಕೇಂದ್ರಬಿಂದು ಚೆನ್ನೈಗಿಂತ ಪೂರ್ವ ಆಗ್ನೆಯಕ್ಕೆ 930 ಕಿ.ಮೀ. ದೂರದಲ್ಲಿದೆ. ಇದರಿಂದಾಗಿ ಅಂಡಮಾನ್‌ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا